ಸಂಗ್ರಹ ಚಿತ್ರ 
ದೇಶ

ವಿದರ್ಭ ನೀರಾವರಿ ಹಗರಣ: ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ವಿದರ್ಭ ನೀರಾವರಿ ಹಗರಣದ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್ ​​ಗೆ ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಕ್ಲೀನ್ ಚಿಟ್ ನೀಡಿದೆ.

ಮುಂಬೈ: ವಿದರ್ಭ ನೀರಾವರಿ ಹಗರಣದ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್ ​​ಗೆ ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಕ್ಲೀನ್ ಚಿಟ್ ನೀಡಿದೆ.

ಪ್ರಕರಣದ ಕುರಿತಂತೆ ಬಾಂಬೆ ಹೈಕೋರ್ಟ್​ನಲ್ಲಿರುವ ನಾಗಪುರ ನ್ಯಾಯಪೀಠಕ್ಕೆ ಮಹಾರಾಷ್ಟ್ರ ಎಸಿಬಿ ಅಫಿಡವಿಟ್ ಸಲ್ಲಿಸಿದ್ದು, ವಿದರ್ಭ ಪ್ರದೇಶದಲ್ಲಿ ನಡೆದಿರುವ ನೀರಾವರಿ ಹಗರಣಗಳಲ್ಲಿ ಅಜಿತ್​ ಪವಾರ್ ಪಾತ್ರವಿಲ್ಲ ಎಂದು ಅಫಿಡವಿಟ್​​ನಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ ಎನ್ನಲಾಗಿದೆ.

ಅಜಿತ್ ಪವಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಮಹಾರಾಷ್ಟ್ರದ ಅತ್ಯಂತ ಬರಪೀಡಿತ ಪ್ರದೇಶವಾದ ವಿದರ್ಬದಲ್ಲಿ ಹಲವು ನೀರಾವರಿ ಯೋಜನೆಗಳು ಜಾರಿಯಾಗಿದ್ದವು. ಅವುಗಳಲ್ಲಿ ಅಜಿತ್ ಪವಾರ್ ಭಾರಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿ ಎಸಿಬಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇನ್ನು ಈ ಹಿಂದಿನ ವಿಚಾರಣೆಯಲ್ಲಿ ಕೋರ್ಟ್ ಪ್ರಕರಣದಲ್ಲಿ ಅಜಿತ್ ಪವಾರ್ ಅವರ ಪಾತ್ರದ ಕುರಿತು ಎಸಿಬಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು.

ಮಹಾರಾಷ್ಟ್ರದಲ್ಲಿ ಎನ್​ಸಿಪಿ, ಕಾಂಗ್ರೆಸ್​​ ಮತ್ತು ಶಿವಸೇನೆಯ ಮಹಾ ವಿಕಾಸ ಅಘಾಡಿ ಕೂಟ ಸರ್ಕಾರ ರಚನೆಯಾದ ನವೆಂಬರ್ 28ರ ಹಿಂದಿನ ದಿನ ನವೆಂಬರ್ 27 ರಂದು ಅಫಿಡವಿಟ್​ ಸಲ್ಲಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT