ಸಂಗ್ರಹ ಚಿತ್ರ 
ದೇಶ

ವಿದರ್ಭ ನೀರಾವರಿ ಹಗರಣ: ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ವಿದರ್ಭ ನೀರಾವರಿ ಹಗರಣದ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್ ​​ಗೆ ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಕ್ಲೀನ್ ಚಿಟ್ ನೀಡಿದೆ.

ಮುಂಬೈ: ವಿದರ್ಭ ನೀರಾವರಿ ಹಗರಣದ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್ ​​ಗೆ ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಕ್ಲೀನ್ ಚಿಟ್ ನೀಡಿದೆ.

ಪ್ರಕರಣದ ಕುರಿತಂತೆ ಬಾಂಬೆ ಹೈಕೋರ್ಟ್​ನಲ್ಲಿರುವ ನಾಗಪುರ ನ್ಯಾಯಪೀಠಕ್ಕೆ ಮಹಾರಾಷ್ಟ್ರ ಎಸಿಬಿ ಅಫಿಡವಿಟ್ ಸಲ್ಲಿಸಿದ್ದು, ವಿದರ್ಭ ಪ್ರದೇಶದಲ್ಲಿ ನಡೆದಿರುವ ನೀರಾವರಿ ಹಗರಣಗಳಲ್ಲಿ ಅಜಿತ್​ ಪವಾರ್ ಪಾತ್ರವಿಲ್ಲ ಎಂದು ಅಫಿಡವಿಟ್​​ನಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ ಎನ್ನಲಾಗಿದೆ.

ಅಜಿತ್ ಪವಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಮಹಾರಾಷ್ಟ್ರದ ಅತ್ಯಂತ ಬರಪೀಡಿತ ಪ್ರದೇಶವಾದ ವಿದರ್ಬದಲ್ಲಿ ಹಲವು ನೀರಾವರಿ ಯೋಜನೆಗಳು ಜಾರಿಯಾಗಿದ್ದವು. ಅವುಗಳಲ್ಲಿ ಅಜಿತ್ ಪವಾರ್ ಭಾರಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿ ಎಸಿಬಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇನ್ನು ಈ ಹಿಂದಿನ ವಿಚಾರಣೆಯಲ್ಲಿ ಕೋರ್ಟ್ ಪ್ರಕರಣದಲ್ಲಿ ಅಜಿತ್ ಪವಾರ್ ಅವರ ಪಾತ್ರದ ಕುರಿತು ಎಸಿಬಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು.

ಮಹಾರಾಷ್ಟ್ರದಲ್ಲಿ ಎನ್​ಸಿಪಿ, ಕಾಂಗ್ರೆಸ್​​ ಮತ್ತು ಶಿವಸೇನೆಯ ಮಹಾ ವಿಕಾಸ ಅಘಾಡಿ ಕೂಟ ಸರ್ಕಾರ ರಚನೆಯಾದ ನವೆಂಬರ್ 28ರ ಹಿಂದಿನ ದಿನ ನವೆಂಬರ್ 27 ರಂದು ಅಫಿಡವಿಟ್​ ಸಲ್ಲಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT