ಸಾಂದರ್ಭಿಕ ಚಿತ್ರ 
ದೇಶ

ಗಗನಕ್ಕೇರಿದ ಈರುಳ್ಳಿ ಬೆಲೆ: ಕೆಜಿಗೆ 165, ಜನವರಿ 20ರ ವೇಳೆಗೆ ಈರುಳ್ಳಿ ಆಮದು ಎಂದ ಸರ್ಕಾರ

ದಿನೇ ದಿನೇ ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ, ಬೆಂಗಳೂರು ಹಾಗೂ ಚೆನ್ನೈ ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಶುಕ್ರವಾರ 165ರ ಗಡಿ ದಾಟಿದೆ.

ನವದೆಹಲಿ: ದಿನೇ ದಿನೇ ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ, ಬೆಂಗಳೂರು ಹಾಗೂ ಚೆನ್ನೈ ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಶುಕ್ರವಾರ 165ರ ಗಡಿ ದಾಟಿದೆ.

ಈ ಮಧ್ಯೆ ಕೇಂದ್ರ ಸರ್ಕಾರ, ಜನವರಿ 20ರ ವೇಳೆ ಈರುಳ್ಳಿಯನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುವುದು ಎಂದು ಸಂಸತ್ತಿಗೆ ತಿಳಿಸಿದೆ.

ಇಂದು ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಈರುಳ್ಳಿ ಬೆಲೆ ಏರಿಕೆ ಬಗ್ಗೆ ಪ್ರತ್ರಿಯಿಸಿದ ಗ್ರಾಹಕ ವ್ಯಾವಹಾರಗಳ ಖಾತೆ ರಾಜ್ಯ ಸಚಿವ ದನ್ವೆ ರಾವ್ ಸಾಹೇಬ್ ದಾದಾರಾವ್ ಅವರು, ಈರುಳ್ಳಿ ಬೆಲೆ ಏರಿಕೆ ಬಗ್ಗೆ ಯಾವುದೇ ಅನುಮಾನ ಇಲ್ಲ. ಭಾರಿ ಮಳೆಯಿಂದಾಗಿ ಮಹಾರಾಷ್ಟ್ರದಲ್ಲಿ ಈರುಳ್ಳಿ ಬೆಳೆ ಹಾನಿಯಾಗಿದೆ. ಹೀಗಾಗಿ ಬೆಲೆ ಏರಿಕೆಯಾಗಿದೆ. ಸರ್ಕಾರ ವಿದೇಶದಿಂದ ಈರುಳ್ಳಿ ಆಮದು ಮಾಡಿಕೊಳ್ಳುತ್ತಿದ್ದು, ಜನವರಿ 20ರ ವೇಳೆಗೆ ಬರಲಿದೆ ಎಂದರು.

ಸರ್ಕಾರ 1.2 ಲಕ್ಷ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ ಎಂದು ಸಚಿವರು ತಿಳಿಸಿದರು.

ಗೋವಾದ ಪಣಜಿಯಲ್ಲಿ ಈರುಳ್ಳಿ ಬೆಲೆ 165 ರೂ.ಗೆ ತಲುಪಿದೆ. ಗೋವಾ ಸರ್ಕರ ರಾಜ್ಯದ ಜನತೆಗೆ ಸಬ್ಸಿಡಿ ದರದಲ್ಲಿ ತರಕಾರಿ ನೀಡುತ್ತಿದೆಯಾದರೂ, ಈರುಳ್ಳಿ ನೀಡುವಲ್ಲಿ ವಿಫಲವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಫಲೋತ್ಪಾದನ ಮಹಾಮಂಡಳದ ಅಂಗಡಿಗಳಲ್ಲೂ ಈರುಳ್ಳಿ ಬೆಲೆ 129 ರೂ.ಗೆ ತಲುಪಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಮುಂದೆ ಈರುಳ್ಳಿ ದರ 200 ರೂ. ಗಡಿ ದಾಟಿದರು ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.

ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಗಟು ಈರುಳ್ಳಿ ಬೆಲೆ 1 ಕೆ.ಜಿ.ಗೆ 150 ರೂ. ದಾಟಿದೆ. ಮಾರುಕಟ್ಟೆಗೆ ಹೊಸ ಈರುಳ್ಳಿ ಪೂರೈಕೆಯಾಗುವ ತನಕ ಮುಂದಿನ ವರ್ಷ ಜನವರಿ 20ವರೆಗೆ ಇದೇ ಬೆಲೆ ಇರುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT