ರಾಮನಾಥ ಕೋವಿಂದ್ 
ದೇಶ

ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿ: ರಾಷ್ಟ್ರಪತಿಗೆ ಕೇಂದ್ರ ಶಿಫಾರಸು

ಹೈದರಾಬಾದ್ ಪೊಲೀಸರು ಪಶು ವೈದ್ಯೆ ಹತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ  ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ರಮನಾಥ್​​ ಕೋವಿಂದ್ ಅವರಿಗೆ ಶುಕ್ರವಾರ ಶಿಫಾರಸು ಮಾಡಿದೆ.

ನವದೆಹಲಿ: ಹೈದರಾಬಾದ್ ಪೊಲೀಸರು ಪಶು ವೈದ್ಯೆ ಹತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ  ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ರಮನಾಥ್​​ ಕೋವಿಂದ್ ಅವರಿಗೆ ಶುಕ್ರವಾರ ಶಿಫಾರಸು ಮಾಡಿದೆ.

ನಿರ್ಭಯಾ ಹತ್ಯಾಚಾರ ಪ್ರಕರಣದ ಪ್ರಮುಖ ಅಪರಾಧಿ ವಿನಯ್ ಶರ್ಮಾಗೆ ಗಲ್ಲು ಶಿಕ್ಷೆಗೆ ಗುರಿಯಾಗಿದ್ದು, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದು, ಅದನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ.

2012ರ ಡಿಸೆಂಬರ್ 16ರಂದು ರಾತ್ರಿ ವೇಳೆ ತನ್ನ ಸ್ನೇಹಿತನೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿಯ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ಒಟ್ಟು ಆರು ಮಂದಿ ಅತ್ಯಂತ ಕ್ರೂರ ಹಾಗೂ ಅಮಾನುಷವಾಗಿ ಅತ್ಯಾಚಾರವೆಸಗಿದ್ದರು. ಇದನ್ನು ತಡೆಯಲು ಬಂದ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಮೃಗೀಯವಾಗಿ ಅತ್ಯಾಚಾವೆಗಿದ್ದ ಅಪರಾಧಿಗಳು ಯುವತಿಯನ್ನು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಗೆಸೆದಿದ್ದರು. ಈ ಘೋರ ಕೃತ್ಯದಿಂದ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ನಿರ್ಭಯಾ ಚಿಕಿತ್ಸೆ ಫಲಕಾರಿಯಾಗದೆ ಡಿ. 29ರಂದು ಸಿಂಗಾಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು.

ಈ ಆರು ಮಂದಿ ಅಪರಾಧಿಗಳಲ್ಲಿ ರಾಮ್ ಸಿಂಗ್ ಎಂಬಾತ 2013ರಲ್ಲಿ ಕೇಸ್​ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ತಿಹಾರ್ ಜೈಲಿನಲ್ಲಿ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಬಾಲಾಪರಾಧಿಯಾಗಿದ್ದರಿಂದ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇನ್ನುಳಿದ ನಾಲ್ವರು ಅಪರಾಧಿಗಳಿಗೆ ತ್ವರಿತ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಅಲ್ಲದೇ ಈ ಆದೇಶವನ್ನು ದೆಹಲಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT