ಅಜಂ ಖಾನ್ 
ದೇಶ

ಈರುಳ್ಳಿ, ಬೆಳ್ಳುಳ್ಳಿ, ಮಾಂಸ ತಿನ್ನಬೇಡಿ ಎಲ್ಲಾ ಉಳಿತಾಯ ಆಗುತ್ತೆ: ಅಜಂ ಖಾನ್

ಈರುಳ್ಳಿ ಬೆಲೆ ಏರಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಈರುಳ್ಳಿ ಸೇವನೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಈರುಳ್ಳಿ ಬೆಲೆ ಏರಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಈರುಳ್ಳಿ ಸೇವನೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈರುಳ್ಳಿ ತಿನ್ನುವುದನ್ನು ನಿಲ್ಲಿಸಿ, ಅದನ್ನು ತಿನ್ನಲೇ ಬೇಕು ಎನ್ನುವುದು ಕಡ್ಡಾಯವೇ? ನಮ್ಮ ಜೈನ ಸಹೋದರರು ಅವುಗಳನ್ನು ತಿನ್ನುವುದಿಲ್ಲ. ಈರುಳ್ಳಿ ತಿನ್ನುವುದನ್ನು ನಿಲ್ಲಿಸಿ, ಬೆಳ್ಳುಳ್ಳಿ ತಿನ್ನುವುದನ್ನು ನಿಲ್ಲಿಸಿ, ಮಾಂಸ ತಿನ್ನುವುದನ್ನು ನಿಲ್ಲಿಸಿ, ಎಲ್ಲವೂ ಉಳಿತಾಯವಾಗುತ್ತದೆ" ಎಂದು ತಿಳಿಸಿದ್ದಾರೆ.

"ಈರುಳ್ಳಿ ತಿನ್ನಬೇಡಿ, ಅದು ದುರ್ವಾಸನೆಯನ್ನು ನೀಡುತ್ತದೆ. ಒಮ್ಮೆ ರಾಣಿಯೊಬ್ಬರು 'ಸಾರ್ವಜನಿಕರಿಗೆ ತಿನ್ನಲು ಬ್ರೆಡ್ ಇಲ್ಲದಿದ್ದರೆ ಕೇಕ್ ತಿನ್ನಲು ಬಿಡಿ' ಎಂದು ಹೇಳಿದ್ದರು" ಎಂದು ಉದಾಹರಣೆ ನೀಡಿದ ಆಜಮ್ ಖಾನ್, ಈರುಳ್ಳಿ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ ಈರುಳ್ಳಿ ತಿನ್ನುವುದನ್ನು ನಿಲ್ಲಿಸುವಂತೆ ರಾಷ್ಟ್ರಕ್ಕೆ ಅವರು ನೀಡಿದ ಸಂದೇಶ ಎಂದು ತೋರುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT