ಶಶಿ ತರೂರ್ 
ದೇಶ

ವಿವರಗಳು ಸರಿಯಾಗಿ ಗೊತ್ತಾಗುವವರೆಗೂ ನಾವು ಖಂಡಿಸಲು ಹೋಗಬಾರದು: ಶಶಿ ತರೂರ್ 

ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಸುಟ್ಟು ಕೊಂದುಹಾಕಿದ ನಾಲ್ವರು ಆರೋಪಿಗಳನ್ನು ಶುಕ್ರವಾರ ನಸುಕಿನ ಜಾವ ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದು ಹಾಕಿರುವ ಘಟನೆ ಬಗ್ಗೆ ಸರಿಯಾದ ವಿವರಗಳು ಹೊರಬರುವವರೆಗೆ ಜನರು ಖಂಡಿಸಲು ಮುಂದಾಗಬಾರದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ:ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಸುಟ್ಟು ಕೊಂದುಹಾಕಿದ ನಾಲ್ವರು ಆರೋಪಿಗಳನ್ನು ಶುಕ್ರವಾರ ನಸುಕಿನ ಜಾವ ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದು ಹಾಕಿರುವ ಘಟನೆ ಬಗ್ಗೆ ಸರಿಯಾದ ವಿವರಗಳು ಹೊರಬರುವವರೆಗೆ ಜನರು ಖಂಡಿಸಲು ಮುಂದಾಗಬಾರದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.


ಹತ್ಯೆ ನಡೆದು ವೈದ್ಯೆಯನ್ನು ಕೊಂದು ಹಾಕಿದ್ದ ಸ್ಥಳಕ್ಕೆ ಆರೋಪಿಗಳನ್ನು ಇಂದು ನಸುಕಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಅವರು ತಪ್ಪಿಸಲು ಯತ್ನಿಸಿದಾಗ ಎನ್ ಕೌಂಟರ್ ಮಾಡಿ ಕೊಂದು ಹಾಕಲಾಯಿತು ಎಂದು ತೆಲಂಗಾಣ ಪೊಲೀಸರು ಹೇಳುತ್ತಾರೆ.
ತೆಲಂಗಾಣ ಪೊಲೀಸರ ಕ್ರಮವನ್ನು ಪತ್ರಕರ್ತೆಯೊಬ್ಬರು ಟ್ವೀಟ್ ಮಾಡಿ ಎನ್ ಕೌಂಟರ್ ಕ್ರಮ ಹೆಚ್ಚುವರಿ ನ್ಯಾಯಾಂಗ ಹತ್ಯೆಯೆನಿಸಬಹುದು. ಇದು ಭಾರತೀಯ ಸಾಮಾಜಿಕ ವ್ಯವಸ್ಥೆಗೆ ಅಪಾಯವಾಗಿದೆ. ಅತ್ಯಾಚಾರ ಮಾಡಿ ಕೊಂದು ಹಾಕಿದ ಪುರುಷರು ತಪ್ಪಿತಸ್ಥರಾಗಿದ್ದರೆ ಇಲ್ಲಿ ಪೊಲೀಸರು ಸಹ ತಪ್ಪಿತಸ್ಥರು. ಪ್ರಕರಣ ನ್ಯಾಯಾಂಗದಲ್ಲಿ ವಿಚಾರಣೆ ಹಂತದಲ್ಲಿ ಇರುವಾಗ ಹತ್ಯೆ ಮಾಡುವುದು ಸರಿಯಾದ ಕ್ರಮವಾಗುವುದಿಲ್ಲ.  ಇಲ್ಲಿ ಪೊಲೀಸರ ಕ್ರಮವನ್ನು ಒಪ್ಪಿಕೊಂಡರೆ ಮರ್ಯಾದಾ ಹತ್ಯೆಯನ್ನು ಕೂಡ ನಾವು ಒಪ್ಪಿಕೊಂಡಂತಲ್ಲವೇ ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದರು.


ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಶಶಿ ತೂರ್ ತಾತ್ವಿಕವಾಗಿ ನಿಮ್ಮ ಮಾತು ಒಪ್ಪತಕ್ಕದ್ದೇ. ಈ ಬಗ್ಗೆ ನಾವು ಇನ್ನಷ್ಟು ತಿಳಿದುಕೊಳ್ಳಬೇಕಿದೆ. ಆರೋಪಿಗಳು ಶಸ್ತ್ರಸಜ್ಜಿತರಾಗಿದ್ದಿದ್ದರೆ ಮುಂಜಾಗ್ರತೆಯಾಗಿ ಪೊಲೀಸರು ಗುಂಡು ಹಾರಿಸುವುದರಲ್ಲಿ ನ್ಯಾಯವಿದೆ. ಈ ಬಗ್ಗೆ ಸರಿಯಾದ ಮಾಹಿತಿ ಸಿಗುವವರೆಗೂ ನಾವು ಖಂಡಿಸಲು ಮುಂದಾಗಬಾರದು. ಆದರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗ ಅದು ಮುಗಿಯುವ ಮೊದಲೇ ಪೊಲೀಸರು ಆರೋಪಿಗಳನ್ನು ಹತ್ಯೆ ಮಾಡುವುದು ಕಾನೂನಿನಲ್ಲಿ ಸಮ್ಮತವಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT