ಸಂಗ್ರಹ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಆಟಿಕೆ ಕೊಡಿಸೋದಾಗಿ ಕರೆದೊಯ್ದು 9ತಿಂಗಳ ಬಾಲಕಿ ಮೇಲೆ ಅತ್ಯಾಚಾರ!

ಒಂಬತ್ತು ತಿಂಗಳ ಹೆಣ್ಣು ಮಗುವನ್ನು ಆಟಿಕೆ ಕೊಡಿಸುವುದಾಗಿ ಕರೆದೊಯ್ದ ಆಕೆಯ ದೊಡ್ಡಪ್ಪ ಮಗುವಿನ ಮೇಲೆ ಅತ್ಯಾಚಾರ ನಡೆಸಿರುವ ಭೀಕರ ಬ್ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದಿದೆ.

ಕೋಲ್ಕತ್ತಾ:  ಒಂಬತ್ತು ತಿಂಗಳ ಹೆಣ್ಣು ಮಗುವನ್ನು ಆಟಿಕೆ ಕೊಡಿಸುವುದಾಗಿ ಕರೆದೊಯ್ದ ಆಕೆಯ ದೊಡ್ಡಪ್ಪ ಮಗುವಿನ ಮೇಲೆ ಅತ್ಯಾಚಾರ ನಡೆಸಿರುವ ಭೀಕರ ಬ್ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ಥ ಮಗು ಆರೋಪಿಯ ಪಕ್ಕದ ಮನೆಯಲ್ಲಿ ತನ್ನ ಪೋಷಕರೊಡನೆ ವಾಸವಿತ್ತು. ಸಧ್ಯ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.

ಅನುಪ್ ಪ್ರಮಣಿಕ್ ಎಂಬಾತ  ಮಗುವಿನ ಮನೆಗೆ ಭೇಟಿ ನೀಡಿ ಅವಳನ್ನು ತನ್ನೊಂದಿಗೆ ಹೊರಗೆ ಕರೆದೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆಅವನು ಅವಳಿಗೆ ಕೆಲವು ಆಟಿಕೆಗಳನ್ನು ಕೊಡಿಸುವುದಾಗಿ ಭರವಸೆ ನೀಡಿದ್ದ. "ಪ್ರಮಣಿಕ್ ಬಾಲಕಿಯ ತಂದೆಯ ಹಿರಿಯ ಸೋದರನಾಗಿದ್ದು ಆತ ಹತ್ತಿರದ ಸಂಬಂಧಿಯಾಗಿದ್ದ ಕಾರಣ ಮಗುವಿನ ಪೋಷಕರಿಗೆ ಅವನ ಮೇಲೆ ಅನುಮಾನ ಬರಲಿಲ್ಲ"

ಆದರೆ ಸುಮಾರು ಒಂದು ಗಂಟೆಯ ಬಳಿಕ ಹಿಂತಿರುಗಿದ ಪ್ರಮಣಿಕ್  ಮಗುವನ್ನು ಆಕೆಯ ಮನೆಯಲ್ಲಿ ಬಿಟ್ಟಿದ್ದಾನೆ."ಮಗು ಅಳುತ್ತಲೇ ಇರುವುದನ್ನು ಪೋಷಕರು ಗಮನಿಸಿದ್ದಾರೆ. ಪ್ರಾರಂಭದಲ್ಲಿ ಮಗುವಿಗೆ ಆರೋಗ್ಯ ಸಮಸ್ಯೆ ಇರಬಹುದಾಗಿ ಶಂಕಿಸಿದ್ದಾರೆ. ಆದಾಗ್ಯೂ, ಅವರು ಅವಳನ್ನು ಸೂಕ್ಷ್ಮವಾಗಿ ಪರೀಕ್ಷಿಸಿದಾಗ, ಬಾಲಕಿಯ ಮೈನಿಂದ ರಕ್ತಸ್ರಾವವಾಗುತ್ತಿದ್ದದ್ದು ಕಂಡಿದೆ. ಆಗ ಪೋಷಕರು ಪಕ್ಕದ ಮನೆಯಲ್ಲಿದ್ದ ಆರೋಪಿ ಪ್ರಮಣಿಕ್  ಮನೆಗೆ ತೆರಳಿದಾಗ ಆತ ಅಲ್ಲಿರಲಿಲ್ಲ. ಇದರಿಂದ ಅನುಮಾನಗೊಂಡ ಅವರು ಪೋಲೀಸರಿಗೆ ದೂರು ಸಲ್ಲಿಸಿದ್ದಾರೆ. 

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೋಲೀಸರು ಅಪರಾಧಿಯನ್ನು ಬಂಧಿಸಿದ್ದಾರೆ. "ನಾವು ಮಗುವನ್ನು ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಿದ್ದೇವೆ, ಅಲ್ಲಿ ಅವರು ಮಗು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಹೇಳೀದ್ದಾರೆ.ಆದರೆ ಈ ಸಂಬಂಧ ವೈದ್ಯರಿಂದ ಲಿಖಿತ ವರದಿಯನ್ನು ನಾವು ಇನ್ನೂ ಸ್ವೀಕರಿಸಿಲ್ಲ" ಪೋಲೀಸರು ಮಾಹಿತಿ ಒದಗಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಪೊಲೀಸರು ದಾಖಲಿಸಿರುವ 90% ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರ್ಸಥೆಯ ಹತ್ತಿರದ ಸಂಬಂಧಿ ಅಥವಾ ಸ್ನೇಹಿತರೇ ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT