ರಾಮನಾಥ್ ಕೋವಿಂದ್ 
ದೇಶ

ಭಾರತವನ್ನು ವೈದಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸಲು ರಾಷ್ಟ್ರಪತಿ ಕರೆ 

ಭಾರತವನ್ನು ವೈದ್ಯಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸುವುದನ್ನು ಮತ್ತು ಕಡಿಮೆ ವೆಚ್ಚದ ರೋಗ ಪತ್ತೆ, ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಪಾದಿಸಿದ್ದಾರೆ.

ಜೋಧ್ ಪುರ: ಭಾರತವನ್ನು ವೈದ್ಯಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸುವುದನ್ನು ಮತ್ತು ಕಡಿಮೆ ವೆಚ್ಚದ ರೋಗ ಪತ್ತೆ, ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಪಾದಿಸಿದ್ದಾರೆ. 

ಇಲ್ಲಿನ ಏಮ್ಸ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನ ಎರಡನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಭಾರತ, ಸ್ವಂತವಾಗಿ ಉಪಕರಣಗಳನ್ನು ತಯಾರಿಸುವುದು ತುಂಬಾ ಮುಖ್ಯವಾಗಿದೆ. ಇದರಿಂದ ಕಡಿಮೆ ದರದಲ್ಲಿ ಆರೋಗ್ಯ ರಕ್ಷಣೆ ಸೇವೆಗಳು ಒದಗುವುದಲ್ಲದೆ, ಮೇಕ್ ಇನ್ ಇಂಡಿಯಾ ಉಪಕ್ರಮದ ಭಾಗವಾಗಿ ಭಾರತ ವೈದ್ಯಕೀಯ ತಂತ್ರಜ್ಞಾನ ಕೇಂದ್ರವಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.  

ವೈದ್ಯಕೀಯ ವಿದ್ಯಾರ್ಥಿಗಳು ಕನಿಕರ ಮನಸ್ಸು ಬೆಳೆಸಿಕೊಳ್ಳಬೇಕು. ಜನರ ಜೀವ ಉಳಿಸಲು ಮತ್ತು ಜನರ ಆರೋಗ್ಯ ಸುಧಾರಿಸಲು ತಮ್ಮ ಕೌಶಲ ಮತ್ತು ಜ್ಞಾನವನ್ನು ಬಳಸಿಕೊಳ್ಳಬೇಕು. ಇಡೀ ವೈದ್ಯ ವೃತ್ತಿ ಜೀವನದಲ್ಲಿ ವೃತ್ತಿಪರತೆಯನ್ನು ಕಾಪಾಡಿಕೊಳ್ಳಬೇಕು. ತಮ್ಮ ಸುತ್ತಲಿನ ಸಮಾಜ ಎಂದಿಗೂ ಮರೆಯಲಾಗದಂತೆ ಎಲ್ಲ ವೈದ್ಯರು ಮತ್ತು ನರ್ಸಿಂಗ್ ಪದವೀಧರರು ಸೇವೆಯನ್ನು ಸಲ್ಲಿಸಬೇಕು ಎಂದು ಅವರು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT