ಮತದಾನ 
ದೇಶ

ಜಾರ್ಖಂಡ್ ವಿಧಾನಸಭೆ 2ನೇ ಹಂತದ ಮತದಾನ: ಓರ್ವನಿಗೆ ಗಾಯ, ಬೆಳಗ್ಗೆ 9ರವರೆಗೆ ಶೇ.12.35 ಮತದಾನ

ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ ಮತದಾನ ಶನಿವಾರ ಪ್ರಗತಿಯಲ್ಲಿದ್ದು ಗುಮ್ಲಾದ ಸಿಸೈ ಕ್ಷೇತ್ರದಲ್ಲಿ ಭದ್ರತಾ ಪಡೆಯಿಂದ ಶಸ್ತಾಸ್ತ್ರಗಳನ್ನು ಕಸಿಯಲು ಯತ್ನಿಸುತ್ತಿದ್ದ ವೇಳೆ ಗುಂಡು ಹಾರಿಸಿದ್ದರಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ರಾಂಚಿ: ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ ಮತದಾನ ಶನಿವಾರ ಪ್ರಗತಿಯಲ್ಲಿದ್ದು ಗುಮ್ಲಾದ ಸಿಸೈ ಕ್ಷೇತ್ರದಲ್ಲಿ ಭದ್ರತಾ ಪಡೆಯಿಂದ ಶಸ್ತಾಸ್ತ್ರಗಳನ್ನು ಕಸಿಯಲು ಯತ್ನಿಸುತ್ತಿದ್ದ ವೇಳೆ ಗುಂಡು ಹಾರಿಸಿದ್ದರಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.


ಸಿಸೈ ಕ್ಷೇತ್ರದ ಬೂತ್ ಸಂಖ್ಯೆ 36ರಲ್ಲಿ ಭದ್ರತಾ ಪಡೆಯಿಂದ ಬಂದೂಕು ಕಸಿಯಲು ಯತ್ನಿಸಿದ ವ್ಯಕ್ತಿಗಳ ಮೇಲೆ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿ ಗುಂಡು ಹಾರಿಸಿದ್ದರಿಂದ ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುರಾರಿ ಲಾಲ್ ಮೀನಾ ತಿಳಿಸಿದ್ದಾರೆ.


ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೀನಾ ತಿಳಿಸಿದ್ದಾರೆ. 
ಇಂದು ನಡೆಯುತ್ತಿರುವ ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಬೆಳಗ್ಗೆ 9 ಗಂಟೆ ವೇಳೆಗೆ ಶೇಕಡಾ 12.35ರಷ್ಟು ಮತದಾನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT