ಶರದ್ ಅರವಿಂದ್ ಬೋಬ್ಡೆ 
ದೇಶ

ಸೇಡು ತೀರಿಸಿಕೊಂಡರೆ ನ್ಯಾಯ ತನ್ನ ಸ್ವರೂಪ ಕಳೆದುಕೊಳ್ಳುತ್ತದೆ: ಹೈದರಾಬಾದ್​ ಎನ್​ಕೌಂಟರ್​ ಗೆ ಸಿಜೆಐ ಬೋಬ್ಡೆ ಪ್ರತಿಕ್ರಿಯೆ

ದೇಶವನ್ನೇ ಬೆಚ್ಚಿಬೀಳಿಸಿದ್ದ ಹೈದರಾಬಾದ್ ಪಶು ವೈದ್ಯೆ ಮೇಲಿನ ಅಚ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಶುಕ್ರವಾರ ಎನ್ ಕೌಂಟರ್ ಮಾಡಿದ್ದು, ಈ ಬಗ್ಗೆ ಪರ- ವಿರೋಧ ಚರ್ಚೆಗಳು ಆರಂಭವಾಗಿವೆ.

ಜೋಧ್​ಪುರ: ದೇಶವನ್ನೇ ಬೆಚ್ಚಿಬೀಳಿಸಿದ್ದ ಹೈದರಾಬಾದ್ ಪಶು ವೈದ್ಯೆ ಮೇಲಿನ ಅಚ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಶುಕ್ರವಾರ ಎನ್ ಕೌಂಟರ್ ಮಾಡಿದ್ದು, ಈ ಬಗ್ಗೆ ಪರ- ವಿರೋಧ ಚರ್ಚೆಗಳು ಆರಂಭವಾಗಿವೆ.

ಇನ್ನು ಈ ಕುರಿತು ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಅವರು, ನ್ಯಾಯವನ್ನು ಪ್ರತೀಕಾರದ ರೂಪದಲ್ಲಿ ಪಡೆಯಬರಾದು. ಒಂದು ವೇಳೆ ಸೇಡಿನ ರೂಪದಲ್ಲಿ ನ್ಯಾಯವನ್ನು ಪಡೆದುಕೊಂಡರೆ ನ್ಯಾಯದ ಸ್ವರೂಪವನ್ನೇ ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ನ್ಯಾಯ ಎಂದಿಗೂ ತ್ವರಿತವಾಗಿ ದೊರೆಯುವುದಿಲ್ಲ. ಒಂದು ವೇಳೆ ಸೇಡು ತೀರಿಸಿಕೊಂಡರೆ ನ್ಯಾಯ ತನ್ನ ಪಾತ್ರವನ್ನೇ ಕಳೆದುಕೊಳ್ಳಲಿದೆ ಎಂದು ಸಿಜೆಐ ಅಭಿಪ್ರಾಯಪಟ್ಟಿದ್ದಾರೆ.

ಇಂದು ಜೋಧ್​ಪುರದಲ್ಲಿ ನಡೆದ ನೂತನ ರಾಜಸ್ಥಾನ ಹೈಕೋರ್ಟ್​ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೋಬ್ಡೆ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿ ಹೊಸ ತಂತ್ರಜ್ಞಾನಗಳ ಪರಿಚಯ ಹಾಗೂ ಸಂಧಾನ ಸೇರಿದಂತೆ ವಿವಾದಗಳನ್ನು ಬಗೆಹರಿಸುವಲ್ಲಿ ಇರುವ ಪರ್ಯಾಯ ವ್ಯವಸ್ಥೆಗಳನ್ನು ಬಲಪಡಿಸಬೇಕಾಗಿದೆ ಎಂದರು.

ಹೈದರಾಬಾದ್​ ಎನ್​ಕೌಂಟರ್​ ಕುರಿತು ನ್ಯಾಯಾಂಗ ಸುಧಾರಣೆ, ಮರಣದಂಡನೆ ಹಾಗೂ ಬಹುಬೇಗ ನ್ಯಾಯ ದೊರಕುವ ವಿಚಾರವಾಗಿ ದೇಶದಲ್ಲೆಡೆ ನಡೆಯುತ್ತಿರುವ ಚರ್ಚೆಯನ್ನು ಗಮನದಲ್ಲಿಟ್ಟುಕೊಂಡು ಬೊಬ್ಡೆ ಈ ಮಾತುಗಳನ್ನು ಹೇಳಿದ್ದಾರೆ.

ಹತ್ಯಾಚಾರ ಆರೋಪಿಗಳನ್ನು ಘಟನಾಸ್ಥಳಕ್ಕೆ ಪಂಚನಾಮೆಗೆ ಕರೆದೊಯ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದರು. ಅಲ್ಲದೆ ಪೊಲೀಸರ ಮೇಲೆ ಕಲ್ಲುಗಳನ್ನು ತೂರಿದರು ಮತ್ತು ಪೊಲೀಸರ ಕೈಯಲ್ಲಿದ್ದ ಪಿಸ್ತೂಲನ್ನು ಕಿತ್ತುಕೊಂಡು ಹಲ್ಲೆಗೆ ಮುಂದಾದರು. ಈ ಸಂದರ್ಭದಲ್ಲಿ ಅನಿವಾರ್ಯವಾಗಿ ಪೊಲೀಸರು ಗುಂಡು ಹಾರಿಸಬೇಕಾಯಿತು ಎಂದು ಸೈಬರಾಬಾದ್​ ಪೊಲೀಸ್​ ಆಯುಕ್ತ ಸಿ. ವಿಶ್ವನಾಥ್​ ಸಜ್ಜನರ್ ಅವರು ಎನ್ ಕೌಂಟರ್ ಬಗ್ಗೆ ವಿವರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT