ಆರೋಪಿ ಚೆನ್ನಕೇಶವಲು ಪತ್ನಿ ರೇಣುಕಾ 
ದೇಶ

ಜೈಲಿನಲ್ಲಿರುವ ಇತರರನ್ನೂ ಶೂಟ್ ಮಾಡಿದ ಬಳಿಕವಷ್ಟೇ ಪತಿಯ ಅಂತ್ಯಸಂಸ್ಕಾರ: ಆರೋಪಿ ಪತ್ನಿಯ ಆಕ್ರೋಶ

ಅಪರಾಧಗಳನ್ನು ಮಾಡಿ ಎಷ್ಟೋ  ಮಂದಿ ಜೈಲಿನಲ್ಲಿದ್ದಾರೆ. ಅವರನ್ನು ಕೂಡಾ ಇದೇ ರೀತಿಯಲ್ಲಿ ಪೊಲೀಸರು ಗುಂಡಿಕ್ಕಿ ಸಾಯಿಸಲಿ. ಅಲ್ಲಿಯವರೆಗೂ ತಮ್ಮ ಪತಿಯ ಮೃತದೇಹದ ಅಂತಿಮ ಸಂಸ್ಕಾರ ನೆರವೇರಿಸುವುದಿಲ್ಲ  ಎಂದು ಮೃತ ಆರೋಪಿ ಚೆನ್ನಕೇಶವಲುವಿನ ಹೆಂಡತಿ ರೇಣುಕಾ ಹೇಳಿದ್ದಾರೆ.

ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರ ಕ್ರಮವನ್ನು ಬೆಂಬಲಿಸಿ ದೇಶಾದ್ಯಂತ ಸಂಭ್ರಮಾಚರಣೆ ಮುಂದುವರೆದಿರುವುದಕ್ಕೆ ಎನ್ ಕೌಂಟರ್ ನಲ್ಲಿ ಹತನಾದ ಆರೋಪಿಯೊರ್ವನ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪರಾಧಗಳನ್ನು ಮಾಡಿ ಎಷ್ಟೋ  ಮಂದಿ ಜೈಲಿನಲ್ಲಿದ್ದಾರೆ. ಅವರನ್ನು ಕೂಡಾ ಇದೇ ರೀತಿಯಲ್ಲಿ ಪೊಲೀಸರು ಗುಂಡಿಕ್ಕಿ ಸಾಯಿಸಲಿ. ಅಲ್ಲಿಯವರೆಗೂ ತಮ್ಮ ಪತಿಯ ಮೃತದೇಹದ ಅಂತಿಮ ಸಂಸ್ಕಾರ ನೆರವೇರಿಸುವುದಿಲ್ಲ. ಅವರೆಲ್ಲರನ್ನೂ ಶೂಟ್ ಮಾಡಿದ ಬಳಿಕವಷ್ಟೇ  ಅಂತ್ಯಸಂಸ್ಕಾರ ನೆರವೇರಿಸುವುದಾಗಿ ಮೃತ ಆರೋಪಿ ಚೆನ್ನಕೇಶವಲುವಿನ ಹೆಂಡತಿ ರೇಣುಕಾ ಹೇಳಿದ್ದಾರೆ.

ನಾರಾಯಣಪೇಟೆ ಜಿಲ್ಲೆಯ ತಮ್ಮ ಹಳ್ಳಿಯಲ್ಲಿ  ರಸ್ತೆಯಲ್ಲಿಯೇ  ಗೋಳಾಡುತ್ತಿದ್ದ  ಗರ್ಭೀಣಿ ಮಹಿಳೆಯಾಗಿರುವ ರೇಣುಕಾ, ನನಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದಳು.

ಪತಿಗೆ ಏನೂ ಆಗಲ್ಲ, ಮತ್ತೆ ಮನೆಗೆ ಬರುತ್ತಾರೆ ಎಂದು ಹೇಳಲಾಗಿತ್ತು, ಆದರೆ, ಈಗ ಏನಾಯಿತು ಎಂಬುದು ಗೊತ್ತಿಲ್ಲ. ತಮ್ಮ ಪತಿ ಹತ್ಯೆಯಾದ ಸ್ಥಳಕ್ಕೆ ನನ್ನನೂ ಕರೆದುಕೊಂಡು ಹೋಗಿ ಸಾಯಿಸಿ ಎಂದು ಆಕೆ ನಿನ್ನೆ ಕೂಡಾ ಪೊಲೀಸರ ಕ್ರಮದ ವಿರುದ್ಧ ಆಕ್ರೋಶಭರಿತ ಮಾತುಗಳನ್ನಾಡಿದ್ದಳು. 

ಎನ್ ಕೌಂಟರ್ ನಲ್ಲಿ ಬಲಿಯಾದ ನಾಲ್ವರು  ಬಡ ಕುಟುಂಬಕ್ಕೆ ಸೇರಿದ್ದು, ಚೆನ್ನಾಗಿ ಸಂಪಾದಿಸುತ್ತಿದ್ದರು. ಆದರೆ,  ಮದ್ಯ ಮತ್ತಿತರ ಚಟಗಳಿಗೆ ದಾಸರಾಗಿದ್ದರು ಎಂದು ಸ್ಥಳೀಯರು ಹೇಳುತ್ತಾರೆ. ಈ ಮಧ್ಯೆ ಕಿರಾತಕರ ಸಾವಿನ ಸಂಭ್ರಮಾಚರಣೆ ಇಂದು ಕೂಡಾ ನಡೆಯಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT