ದೇಶ

ದೆಹಲಿ ಅಗ್ನಿ ಅವಘಡ: ಏಳು ದಿನಗಳೊಳಗೆ ವರದಿ ಕೇಳಿದ ಸರ್ಕಾರ 

Sumana Upadhyaya

ನವದೆಹಲಿ: ಉತ್ತರ ದೆಹಲಿಯ ಅನಜ್ ಮಂಡಿ ಪ್ರದೇಶದಲ್ಲಿ ಕಾರ್ಖಾನೆಯಲ್ಲಿ ಉಂಟಾದ ಅಗ್ನಿ ಅವಘಡದಿಂದ 43 ಮಂದಿ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ತನಿಖೆಗೆ ಆದೇಶಿಸಿದ್ದು 7 ದಿನಗಳೊಳಗೆ ವರದಿ ಕೇಳಿದೆ.


ಘಟನೆಗೆ ಸಂಬಂಧಿಸಿ ತನಿಖೆ ನಡೆಸಲಾಗುವುದು ಎಂದು ದೆಹಲಿ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಇಮ್ರಾನ್ ಹುಸೇನ್ ತಿಳಿಸಿದರು.


ಇದೊಂದು ಭೀಕರ ದುರಂತ. ತನಿಖೆ ನಡೆಸಿ ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹುಸೇನ್ ಟ್ವೀಟ್ ಮಾಡಿದ್ದಾರೆ.

SCROLL FOR NEXT