ನಿರಾಶ್ರಿತರು-ಒಳನುಸುಳುಕೋರರ ನಡುವೆ  ವ್ಯತ್ಯಾಸ ಗ್ರಹಿಸಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ; ಮೋದಿ ಲೇವಡಿ 
ದೇಶ

ನಿರಾಶ್ರಿತರು-ಒಳನುಸುಳುಕೋರರ ನಡುವೆ  ವ್ಯತ್ಯಾಸ ಗ್ರಹಿಸಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ; ಮೋದಿ ಲೇವಡಿ

ಕೇವಲ ತಮ್ಮ ಮತ ಬ್ಯಾಂಕ್ ರಕ್ಷಿಸಿಕೊಳ್ಳುವ ಕಾರಣಕ್ಕಾಗಿ ನಿರಾಶ್ರಿತರು ಹಾಗೂ ಒಳನುಸುಳುಕೋರ ನಡುವಣ ವ್ಯತ್ಯಾಸವನ್ನು ಗ್ರಹಿಸಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಹಾರ ಉಪ ಮುಖ್ಯಮಂತ್ರಿ ಸುಶಿಲ್ ಕುಮಾರ್ ಮೋದಿ  ಲೇವಡಿ ಮಾಡಿದ್ದಾರೆ.

ಪಾಟ್ನಾ: ಕೇವಲ ತಮ್ಮ ಮತ ಬ್ಯಾಂಕ್ ರಕ್ಷಿಸಿಕೊಳ್ಳುವ ಕಾರಣಕ್ಕಾಗಿ ನಿರಾಶ್ರಿತರು ಹಾಗೂ ಒಳನುಸುಳುಕೋರ ನಡುವಣ ವ್ಯತ್ಯಾಸವನ್ನು ಗ್ರಹಿಸಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಹಾರ ಉಪ ಮುಖ್ಯಮಂತ್ರಿ ಸುಶಿಲ್ ಕುಮಾರ್ ಮೋದಿ  ಲೇವಡಿ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ವಿಧೇಯಕ  ಕುರಿತ  ಕಾಂಗ್ರೆಸ್ ಅನುಸರಿಸುತ್ತಿರುವ ನಿಲುವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಮೋದಿ, ಧರ್ಮದ ಹೆಸರಿನಲ್ಲಿ ತಾವು ಹುಟ್ಟಿದ ದೇಶಗಳಲ್ಲಿ ತಾರತಮ್ಯಕ್ಕೆ ಒಳಗಾಗಿರುವ  ಹಿಂದೂ-ಕ್ರಿಶ್ಚಿಯನ್ ನಿರಾಶ್ರಿತರು ಹಾಗೂ ಅನಗತ್ಯ ಒಳನುಸುಳುಕೋರರ ನಡುವೆ ಇರುವ ವ್ಯತ್ಯಾಸವನ್ನು ಕಾಂಗ್ರೆಸ್ ಹಾಗೂ ಅದರ ಸಮಾನ ಮನಸ್ಕ ಪಕ್ಷಗಳು ಉದ್ದೇಶಪೂರ್ವಕವಾಗಿ ಗ್ರಹಿಸುತ್ತಿಲ್ಲ ಎಂದು ಆರೋಪಿಸಿದರು.

ಸಂವಿಧಾನದ ಕಲಂ 370 ಹಾಗೂ ತ್ರಿವಳಿ ತಲಾಖ್  ನಂತಹ  ವಿವಾದಾಸ್ಪದ  ವಿಷಯಗಳ ಕುರಿತು ದೇಶದ  ಹಿತಾಸಕ್ತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ  ನಿಲುವು  ಸರ್ಕಾರದ ರಾಜಕೀಯ ಇಚ್ಛಾ ಶಕ್ತಿಯನ್ನು ಪ್ರದರ್ಶಿಸುತ್ತದೆ  ಎಂದು ಹೇಳಿದರು. ಪೌರತ್ವ  ತಿದ್ದುಪಡಿ ವಿಧೇಯಕ  ಕೂಡಾ ಈ ರಾಜಕೀಯ ಇಚ್ಛಾಶಕ್ತಿಯಿಂದ  ಸಂಸತ್ತಿನ ಅನುಮೋದನೆ ಪಡೆದುಕೊಳ್ಳಲಿದೆ ಎಂದು  ಮೋದಿ   ಅವರು ಆಶಯ ವ್ಯಕ್ತಪಡಿಸಿದರು. ಈ ವಿಧೇಯಕ  ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವ ಮೂಲಕ  ತಮ್ಮ ದೇಶಗಳನ್ನು  ಬಲವಂತದಿಂದ ತೊರೆಯಲಿರುವ  ಲಕ್ಷಾಂತರ ನಿರಾಶ್ರಿತರು  ಭಾರತೀಯ ಪೌರತ್ವವನ್ನು  ಘನತೆಯಿಂದ  ಹೊಂದಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್