ನಿರಾಶ್ರಿತರು-ಒಳನುಸುಳುಕೋರರ ನಡುವೆ  ವ್ಯತ್ಯಾಸ ಗ್ರಹಿಸಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ; ಮೋದಿ ಲೇವಡಿ 
ದೇಶ

ನಿರಾಶ್ರಿತರು-ಒಳನುಸುಳುಕೋರರ ನಡುವೆ  ವ್ಯತ್ಯಾಸ ಗ್ರಹಿಸಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ; ಮೋದಿ ಲೇವಡಿ

ಕೇವಲ ತಮ್ಮ ಮತ ಬ್ಯಾಂಕ್ ರಕ್ಷಿಸಿಕೊಳ್ಳುವ ಕಾರಣಕ್ಕಾಗಿ ನಿರಾಶ್ರಿತರು ಹಾಗೂ ಒಳನುಸುಳುಕೋರ ನಡುವಣ ವ್ಯತ್ಯಾಸವನ್ನು ಗ್ರಹಿಸಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಹಾರ ಉಪ ಮುಖ್ಯಮಂತ್ರಿ ಸುಶಿಲ್ ಕುಮಾರ್ ಮೋದಿ  ಲೇವಡಿ ಮಾಡಿದ್ದಾರೆ.

ಪಾಟ್ನಾ: ಕೇವಲ ತಮ್ಮ ಮತ ಬ್ಯಾಂಕ್ ರಕ್ಷಿಸಿಕೊಳ್ಳುವ ಕಾರಣಕ್ಕಾಗಿ ನಿರಾಶ್ರಿತರು ಹಾಗೂ ಒಳನುಸುಳುಕೋರ ನಡುವಣ ವ್ಯತ್ಯಾಸವನ್ನು ಗ್ರಹಿಸಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಹಾರ ಉಪ ಮುಖ್ಯಮಂತ್ರಿ ಸುಶಿಲ್ ಕುಮಾರ್ ಮೋದಿ  ಲೇವಡಿ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ವಿಧೇಯಕ  ಕುರಿತ  ಕಾಂಗ್ರೆಸ್ ಅನುಸರಿಸುತ್ತಿರುವ ನಿಲುವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಮೋದಿ, ಧರ್ಮದ ಹೆಸರಿನಲ್ಲಿ ತಾವು ಹುಟ್ಟಿದ ದೇಶಗಳಲ್ಲಿ ತಾರತಮ್ಯಕ್ಕೆ ಒಳಗಾಗಿರುವ  ಹಿಂದೂ-ಕ್ರಿಶ್ಚಿಯನ್ ನಿರಾಶ್ರಿತರು ಹಾಗೂ ಅನಗತ್ಯ ಒಳನುಸುಳುಕೋರರ ನಡುವೆ ಇರುವ ವ್ಯತ್ಯಾಸವನ್ನು ಕಾಂಗ್ರೆಸ್ ಹಾಗೂ ಅದರ ಸಮಾನ ಮನಸ್ಕ ಪಕ್ಷಗಳು ಉದ್ದೇಶಪೂರ್ವಕವಾಗಿ ಗ್ರಹಿಸುತ್ತಿಲ್ಲ ಎಂದು ಆರೋಪಿಸಿದರು.

ಸಂವಿಧಾನದ ಕಲಂ 370 ಹಾಗೂ ತ್ರಿವಳಿ ತಲಾಖ್  ನಂತಹ  ವಿವಾದಾಸ್ಪದ  ವಿಷಯಗಳ ಕುರಿತು ದೇಶದ  ಹಿತಾಸಕ್ತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ  ನಿಲುವು  ಸರ್ಕಾರದ ರಾಜಕೀಯ ಇಚ್ಛಾ ಶಕ್ತಿಯನ್ನು ಪ್ರದರ್ಶಿಸುತ್ತದೆ  ಎಂದು ಹೇಳಿದರು. ಪೌರತ್ವ  ತಿದ್ದುಪಡಿ ವಿಧೇಯಕ  ಕೂಡಾ ಈ ರಾಜಕೀಯ ಇಚ್ಛಾಶಕ್ತಿಯಿಂದ  ಸಂಸತ್ತಿನ ಅನುಮೋದನೆ ಪಡೆದುಕೊಳ್ಳಲಿದೆ ಎಂದು  ಮೋದಿ   ಅವರು ಆಶಯ ವ್ಯಕ್ತಪಡಿಸಿದರು. ಈ ವಿಧೇಯಕ  ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವ ಮೂಲಕ  ತಮ್ಮ ದೇಶಗಳನ್ನು  ಬಲವಂತದಿಂದ ತೊರೆಯಲಿರುವ  ಲಕ್ಷಾಂತರ ನಿರಾಶ್ರಿತರು  ಭಾರತೀಯ ಪೌರತ್ವವನ್ನು  ಘನತೆಯಿಂದ  ಹೊಂದಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT