ಮೋಹನ್ ಭಾಗವತ್ 
ದೇಶ

ಕೈದಿಗಳಿಗೆ ಹಸುಗಳನ್ನು ಸಾಕುವ ಕೆಲಸ ನೀಡಿದರೆ ಅವರ ಅಪರಾಧಿ ಮನೋಸ್ಥಿತಿ ಕಡಿಮೆಯಾಗುತ್ತದೆ: ಮೋಹನ್ ಭಾಗವತ್ 

ಜೈಲು ಕೈದಿಗಳಿಗೆ ಹಸುಗಳನ್ನು ನೋಡಿಕೊಳ್ಳುವ ಕೆಲಸವನ್ನು ನೀಡಿದರೆ ಅವರ ಅಪರಾಧಿ ಮನೋಭಾವ ಕಡಿಮೆಯಾಗುತ್ತದೆ ಎಂದು ತಿಳಿದುಬಂದಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.

ಪುಣೆ; ಜೈಲು ಕೈದಿಗಳಿಗೆ ಹಸುಗಳನ್ನು ನೋಡಿಕೊಳ್ಳುವ ಕೆಲಸವನ್ನು ನೀಡಿದರೆ ಅವರ ಅಪರಾಧಿ ಮನೋಭಾವ ಕಡಿಮೆಯಾಗುತ್ತದೆ ಎಂದು ತಿಳಿದುಬಂದಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
ಇಂತಹ ಅವಲೋಕನ ಮತ್ತು ಸಂಶೋಧನೆಗಳನ್ನು ದಾಖಲೀಕರಣಗೊಳಿಸಬೇಕು, ಗೋಮಾತೆಯ ಗುಣಗಳನ್ನು ಜಗತ್ತಿಗೆ ತೋರಿಸಬೇಕು ಎಂದರು.


ಗೊ-ವಿಜ್ಞಾನ ಸಂಶೋಧನಾ ಸಂಸ್ಥೆ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಭಾಗವತ್, ಗೋವು ಅಥವಾ ಹಸು ಈ ಜಗತ್ತಿಗೆ ತಾಯಿ, ಇದು ಮಣ್ಣನ್ನು ಪೋಷಿಸುತ್ತದೆ, ಇದು ಪ್ರಾಣಿಗಳನ್ನು, ಪಕ್ಷಿಗಳನ್ನು ಪೋಷಿಸುತ್ತದೆ ಮತ್ತು ಮನುಷ್ಯರನ್ನು ಪೋಷಿಸುತ್ತದೆ ಮತ್ತು ರೋಗಗಳಿಂದ ರಕ್ಷಿಸುತ್ತದೆ, ಮಾನವ ಹೃದಯವನ್ನು ಹೂವಿನಂತೆ ಕೋಮಲಗೊಳಿಸುತ್ತದೆ ಎಂದರು.


ಜೈಲುಗಳಲ್ಲಿ ಹಸುಗಳ ಕೊಟ್ಟಿಗೆಯನ್ನು ಸ್ಥಾಪಿಸಿ ಕೈದಿಗಳು ಹಸುಗಳನ್ನು ಸಾಕಲು ಪ್ರಾರಂಭಿಸಿದಾಗ ಕೈದಿಗಳ ಅಪರಾಧ ಮನೋಸ್ಥಿತಿ ಕ್ಷೀಣಿಸಲು ಪ್ರಾರಂಭವಾಗುವುದನ್ನು ಜೈಲಿನ ಅಧಿಕಾರಿಗಳು ಗಮನಿಸಿದ್ದಾರೆ. ಕೆಲವು ಜೈಲು ಅಧಿಕಾರಿಗಳು ಹಂಚಿಕೊಂಡ ಅನುಭವಗಳಿಂದ ನಾನು ಇದನ್ನು ನಿಮಗೆ ಹೇಳುತ್ತಿದ್ದೇನೆ ಎಂದರು.


ಹಸುವಿನ ಗುಣಗಳನ್ನು ಜಗತ್ತಿಗೆ ಸಾಬೀತುಪಡಿಸಲು ಅದನ್ನು ದಾಖಲೆಗಳಲ್ಲಿ ಬರೆದಿಡಲು ಪ್ರಾರಂಭಿಸಬೇಕು, ಕೈದಿಗಳ ಮೇಲೆ ಮಾನಸಿಕ ಪ್ರಯೋಗಗಳನ್ನು ನಡೆಸಬೇಕಾಗುತ್ತದೆ, ಮತ್ತು ನಿರ್ದಿಷ್ಟ ಸಮಯದವರೆಗೆ ಹಸುಗಳನ್ನು ಸಾಕಿದ ನಂತರ ಕೈದಿಗಳಲ್ಲಿ ಆಗುವ ಬದಲಾವಣೆಗಳನ್ನು ನಿರ್ಧರಿಸಬೇಕು. ಸಂಶೋಧನೆಗಳನ್ನು ವಿವಿಧ ಸ್ಥಳಗಳಿಂದ ಪಡೆಯಬೇಕಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT