ದೇಶ

ದೆಹಲಿ ಅಗ್ನಿ ಅವಘಡ 'ಅತ್ಯಂತ ಭಯಾನಕ' ಎಂದ ಪ್ರಧಾನಿ, ಗೃಹ ಸಚಿವ: ನೆರವಿಗೆ ಸೂಚನೆ 

Sumana Upadhyaya

ನವದೆಹಲಿ: ರಾಜಧಾನಿ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಪ್ರದೇಶದಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.


ಅಗ್ನಿ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಕಾರ್ಮಿಕರಿಗೆ ನನ್ನ ತೀವ್ರ ಸಂತಾಪಗಳು, ಅವರ ಕುಟುಂಬದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆಶಿಸಿದ್ದಾರೆ. 


ದುರಂತ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಧಾವಿಸಿ ಅಗತ್ಯ ನೆರವು ನೀಡುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.


ದೆಹಲಿಯ ಅಗ್ನಿ ದುರಂತದಲ್ಲಿ ಹಲವು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಳಿ ತೀವ್ರ ದುಃಖವಾಗುತ್ತಿದೆ. ಅವರ ಕುಟುಂಬ ವರ್ಗದವರಿಗೆ ನನ್ನ ಸಂತಾಪಗಳು.ಗಾಯಗೊಂಡವರು ಶೀಘ್ರವಾಗಿ ಗುಣಮುಖವಾಗಲಿ. ತುರ್ತು ಆದ್ಯತೆ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ನೆರವು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

SCROLL FOR NEXT