ದೆಹಲಿ: ದುರಂತಕ್ಕೀಡಾಗಿದ್ದ ಅನಜ್ ಮಂಡಿ ಕಟ್ಟಡದಲ್ಲಿ ಮತ್ತೆ ಅಗ್ನಿ ಅವಘಡ 
ದೇಶ

ದೆಹಲಿ: ದುರಂತಕ್ಕೀಡಾಗಿದ್ದ ಅನಜ್ ಮಂಡಿ ಕಟ್ಟಡದಲ್ಲಿ ಮತ್ತೆ ಅಗ್ನಿ ಅವಘಡ

ರಾಷ್ಟ್ರ ರಾಜಧಾನಿ ದೆಹಲಿಯ ಅನಜ್ ಮಂಡಿ ಕಟ್ಟಡಲ್ಲಿ ಭಾನುವಾರ ಅಗ್ನಿ ದುರಂತ ಸಂಭವಿಸಿ 43 ಮಂದಿ ಸಾವಿಗೀಡಾಗಿದ್ದರು. ಇದೀಗ ಮತ್ತದೇ ಕಟ್ಟಡದಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ. 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಅನಜ್ ಮಂಡಿ ಕಟ್ಟಡಲ್ಲಿ ಭಾನುವಾರ ಅಗ್ನಿ ದುರಂತ ಸಂಭವಿಸಿ 43 ಮಂದಿ ಸಾವಿಗೀಡಾಗಿದ್ದರು. ಇದೀಗ ಮತ್ತದೇ ಕಟ್ಟಡದಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ. 

ಮೂರು ದಿನಗಳಲ್ಲಿ ಇದೇ ಕಟ್ಟಡಲ್ಲಿ ಒಟ್ಟು ಮೂರು ಬಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಅಗ್ನಿ ಅವಘಡ ಸಂಭವಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ರೀತಿಯ ಸಾವು-ನೋವುಗಳು ಸಂಭವಿಸಿರುವುದಾಗಿ ವರದಿಗಳಾಗಿಲ್ಲ. 

ನಿನ್ನೆಯಷ್ಟೇ ದೆಹಲಿ ಅನಜ್ ಮಂಡಿ ಕಟ್ಟಡದಲ್ಲಿ ಘೋರ ಅಗ್ನಿ ದುರಂತ ಸಂಭವಿಸಿತ್ತು. ದುರಂತದಲ್ಲಿ 43 ಮಂದಿ ಕಾರ್ಮಿಕರು ದುರ್ಮರಣವನ್ನಪ್ಪಿದ್ದರು. ಘಟನೆ ಸಂಭವಿಸುತ್ತಿದ್ದಂತೆಯೇ 30 ವಾಹನಗಳಲ್ಲಿ ಬಂದ 150 ಅಗ್ನಿಶಾಮಕ ಸಿಬ್ಬಂದಿ ಪ್ರಾಣದ ಹಂಗು ತೊರೆದು ಕಾರ್ಯಾಚರಣೆ ನಡೆಸಿ 63 ಕಾರ್ಮಿಕರನ್ನು ಕಟ್ಟಡದಿಂದ ಹೊರಗೆ ತರುವ ಮೂಲಕ ಅವರ ಪ್ರಾಣ ರಕ್ಷಿಸಿದ್ದರು. ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳೂ ಸೇರಿ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT