ನಿರ್ಭಯಾ ದೋಷಿಗಳಿಗೆ ಶಿಕ್ಷೆ ಸನ್ನಿಹಿತ 
ದೇಶ

ನಿರ್ಭಯಾ ದೋಷಿಗಳಿಗೆ ಶಿಕ್ಷೆ ಸನ್ನಿಹಿತ: ಗಲ್ಲು ಶಿಕ್ಷೆ ಜಾರಿಗೊಳಿಸುವ ಅಧಿಕಾರಿಗಾಗಿ ಹುಡುಕಾಟ ಆರಂಭ

ಗಲ್ಲು ಶಿಕ್ಷೆಯಿಂದ ಕ್ಷಮೆ ಕೋರಿ ನಿರ್ಭಯಾ ಪ್ರಕರಣದ ದೋಷಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿರುವ ಬೆನ್ನಲ್ಲೇ, ದಹಲಿಯ ತಿಹಾರ್ ಜೈಲಿನ ಅಧಿಕಾರಿಗಳು, ಗಲ್ಲು ಶಿಕ್ಷೆ ಜಾರಿಗೊಳಿಸುವ ವ್ಯಕ್ತಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

ನವದೆಹಲಿ: ಗಲ್ಲು ಶಿಕ್ಷೆಯಿಂದ ಕ್ಷಮೆ ಕೋರಿ ನಿರ್ಭಯಾ ಪ್ರಕರಣದ ದೋಷಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿರುವ ಬೆನ್ನಲ್ಲೇ, ದಹಲಿಯ ತಿಹಾರ್ ಜೈಲಿನ ಅಧಿಕಾರಿಗಳು, ಗಲ್ಲು ಶಿಕ್ಷೆ ಜಾರಿಗೊಳಿಸುವ ವ್ಯಕ್ತಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

ಪ್ರಸ್ತುತ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ಜಾರಿಗೊಳಿಸುವ ಯಾವುದೇ ಅರ್ಹ ವ್ಯಕ್ತಿ ಅಥವಾ ಅಧಿಕಾರಿ ಇಲ್ಲದ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಜೈಲು ಅಧಿಕಾರಿಗಳ ಜೊತೆ ತಿಹಾರ್ ಜೈಲಿನ ಅಧಿಕಾರಿಗಳು ಮಾತುಕತೆ ಆರಂಭಿಸಿದ್ದಾರೆಂದು ಮೂಲಗಳು ತಿಳಿಸಿವೆ. ಇದು ನಿರ್ಭಯಾ ಪ್ರಕರಣದ ನಾಲ್ವರು ದೋಷಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸಮಯ ಸನ್ನಿಹಿತವಾಗಿದೆ ಎಂಬುದರ ಸುಳಿವಾಗಿದೆ ಎಂದು ಹೇಳಲಾಗುತ್ತಿದೆ. 

ತಿಹಾರ್ ಜೈಲಲ್ಲಿ ಯಾವ ಗೊಂದಲವಿಲ್ಲ, ಅಗತ್ಯ ಬಿದ್ದರೆ ಗಲ್ಲುಶಿಕ್ಷೆ ವಿಧಿಸಲು ಬೇರೆ ರಾಜ್ಯದ ಅಧಿಕಾರಿ ಕರೆತರುತ್ತೇವೆ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 

2001ರಲ್ಲಿ ನಡೆದ ಸಂಸತ್ಮೇಲಿನ ದಾಳಿ ಪ್ರಕರಣದ ದೋಷಿ ಅಫ್ಜಲ್ ಗುರುಗೆ 2013ರ ಫೆಬ್ರವರಿ ತಿಂಗಳಿನಲ್ಲಿ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ತಿಹಾರ್ ಜೈಲಿನ ಸಿಬ್ಬಂದಿಯೊಬ್ಬರೇ ಈ ಕೆಲಸ ನೆರವೇರಿಸಿದ್ದರು. ಆ ಬಳಿಕ ಯಾರನ್ನೂ ಗಲ್ಲಿಗೆ ಏರಿಸಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT