ಅಮಿತ್ ಶಾ 
ದೇಶ

ಪೌರತ್ವ ತಿದ್ದುಪಡಿ ಮಸೂದೆ: ಈಶಾನ್ಯ ರಾಜ್ಯಗಳ ರಕ್ಷಣೆ, ಅಲ್ಲಿ ಈ ಹೊಸ ಕಾನೂನು ಅನ್ವಯಿಸುವುದಿಲ್ಲ: ಅಮಿತ್ ಶಾ

ಧಾರ್ಮಿಕ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಉದ್ದೇಶದೊಂದಿಗೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ: ಧಾರ್ಮಿಕ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಉದ್ದೇಶದೊಂದಿಗೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಮಸೂದೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಬಿಜೆಪಿ ನೇತೃತ್ವದ ಸರ್ಕಾರವು ಸಂವಿಧಾನದ ಆರನೇ ವೇಳಾಪಟ್ಟಿಯಲ್ಲಿರುವ ಪ್ರದೇಶದ ಕೆಲವು ಭಾಗಗಳಿಗೆ ವಿನಾಯಿತಿ ನೀಡಲು ನಿರ್ಧರಿಸಿಲಾಗಿದೆ. ಅದರಂತೆ ಇದು ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಮಿಜೋರಾಂನಲ್ಲಿ ಸ್ವಾಯತ್ತ ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಿಗೆ ವಿನಾಯ್ತಿ ನೀಡಿದೆ.

ಆಂತರಿಕ ಸಾಲಿನ ಪರವಾನಗಿ ಹೊಂದಿರುವ ರಾಜ್ಯಗಳಾದ(ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ಮಿಜೋರಾಂ) ಈ ಮಸೂದೆ ಅನ್ವಯಿಸುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ಈಶಾನ್ಯ ರಾಜ್ಯಗಳ ಜನರ ಆತಂಕವನ್ನು ನೀಗಿಸಲು ಪ್ರಯತ್ನಿಸಿದ ಶಾ, ನರೇಂದ್ರ ಮೋದಿ ಸರ್ಕಾರವು ಈ ಪ್ರದೇಶದ ಜನರ ಪದ್ಧತಿ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಬದ್ಧವಾಗಿದೆ ಮತ್ತು ಮಣಿಪುರವನ್ನು ಇನ್ನರ್ ಲೈನ್ ಪರ್ಮಿಟ್ ಆಡಳಿತದ ಅಡಿಯಲ್ಲಿ ತರಲಾಗುವುದು ಎಂದರು.

ನಮ್ಮ ದೇಶದ ಕಾನೂನಿನ ಪ್ರಕಾರ ಆಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಮುಸ್ಲಿಂಯೇತರರು ನಾಗರಿಕತ್ವಕ್ಕೆ ಅರ್ಜಿ ಹಾಕಿದರೆ ನಾವು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಧಾರ್ಮಿಕ ಕಿರುಕುಳ ಅನುಭವಿಸದ ವ್ಯಕ್ತಿ ಈ ತಿದ್ದುಪಡಿಯಿಂದ ಪ್ರಯೋಜನ ಪಡೆಯುವುದಿಲ್ಲ ಎಂದರು.

ಪೌರತ್ವ(ತಿದ್ದುಪಡಿ)ಮಸೂದೆಯನ್ನು ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದರು. ನಂತರ ಮತಕ್ಕೆ ಹಾಕಲಾಗಿತ್ತು. ಮಸೂದೆ ಪರವಾಗಿ 293 ಸದಸ್ಯರು ಮತ ಹಾಕಿದರೆ ವಿರುದ್ಧವಾಗಿ 82 ಮತಗಳು ಬಿದ್ದವು. ಇದರೊಂದಿಗೆ ಮಸೂದೆಗೆ ಅಂಗೀಕಾರ ಸಿಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT