ಸುಪ್ರೀಂ ಕೋರ್ಟ್ ಅಂಗಳಕ್ಕೆ ಪೌರತ್ವ ತಿದ್ದುಪಡಿ ಮಸೂದೆ! 
ದೇಶ

ಸುಪ್ರೀಂ ಕೋರ್ಟ್ ಅಂಗಳಕ್ಕೆ ಪೌರತ್ವ ತಿದ್ದುಪಡಿ ಮಸೂದೆ! 

ಲೋಕಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿರುವ ಪೌರತ್ವ (ತಿದ್ದುಪಡಿ) ಮಸೂದೆ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗುವ ಸಾಧ್ಯತೆ ಇದೆ. 

ನವದೆಹಲಿ: ಲೋಕಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿರುವ ಪೌರತ್ವ (ತಿದ್ದುಪಡಿ) ಮಸೂದೆ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗುವ ಸಾಧ್ಯತೆ ಇದೆ. 

ಮಸೂದೆಯನ್ನು ವಿರೋಧಿಸುತ್ತಿರುವ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ (ಎಎಎಸ್ ಯು) ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದೆ. 

ಸಂಘಟನೆಯ ಮುಖ್ಯ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಟುವಾಗಿ ವಿರೋಧಿಸಿದ್ದು, ಯಾವುದೇ ಪರಿಸ್ಥಿತಿಯಲ್ಲಿಯೂ ಮಸೂದೆಯನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. 

ಮಸೂದೆ ನಮ್ಮ ಹಕ್ಕುಗಳನ್ನು ಕಸಿಯುತ್ತದೆ. ಇದರ ವಿರುದ್ಧ ಪ್ರತಿಭಟನೆ ನಡೆಸಬೇಕು. ವಿಭಜನಕಾರಿ ಬಿಜೆಪಿ ಈಶಾನ್ಯ ಪ್ರದೇಶದಲ್ಲಿ ಧ್ರುವೀಕರಣಕ್ಕೆ ಯತ್ನಿಸುತ್ತಿದೆ. ಸಿಎಬಿ ವಿರುದ್ಧ ಕಾನೂನಿನ ಮೊರೆ ಹೋಗುತ್ತೇವೆ, ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಭಟ್ಟಾಚಾರ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT