ರಾಹುಲ್ ಗಾಂಧಿ 
ದೇಶ

ಪೌರತ್ವ ಮಸೂದೆ ಮೂಲಕ ಭಾರತೀಯ ಸಂವಿಧಾನದ ಮೇಲೆ ದಾಳಿ: ರಾಹುಲ್ ಗಾಂಧಿ

ಪೌರತ್ವ (ತಿದ್ದುಪಡಿ) ಮಸೂದೆ ಮೂಲಕ ಭಾರತೀಯ ಸಂವಿಧಾನದ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ. 

ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆ ಮೂಲಕ ಭಾರತೀಯ ಸಂವಿಧಾನದ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಪೌರತ್ವ ಮಸೂದೆಯೊಂದು ಭಾರತೀಯ ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಇದನ್ನು ಯಾರೇ ಬೆಂಬಲಿಸಿದರೂ ಅದೊಂದು ದಾಳಿ ಹಾಗೂ ನಮ್ಮ ದೇಶದ ಅಡಿಪಾಯದ ಮೇಲೆ ನಾಶಪಡಿಸುವ ಯತ್ನವಾಗಿದೆ ಎಂದು ಹೇಳಿದ್ದಾರೆ. 

ವಿವಾದಿತ ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಮಸೂದೆಗೆ ಲೋಕಸಭೆ ಅಸ್ತು ಎಂದು ಹೇಳಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನಗಳಲ್ಲಿನ ಧಾರ್ಮಿಕ ಉಪದ್ರವಗಳಿಂದ ಬೇಸತ್ತು, ಅಲ್ಲಿಂದ ಭಾರತಕ್ಕೆ ಬಂದಿರುವ ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತರಿಗೆ ಭಾರತೀಯ ಪೌರತ್ವ ಉದ್ದೇಶವು ಮಸೂದೆಗೆ ಇದೆ. ಇನ್ನು ವಿಧೇಯಕವು ರಾಜ್ಯಸಭೆಯಲ್ಲಿ ಮಂಡನೆಯಾಗಿ ಅಲ್ಲೂ ಅನುಮೋದನೆ ಪಡೆದುಕೊಂಡಿದ್ದೇ ಆದರೆ, ಇವರಿಗೆಲ್ಲಾ ಬಾರತೀಯ ಪೌರತ್ವ ಲಭಿಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಹೃದಯ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ವಿಶೇಷ ಸಂವಾದ! Video

ಕೊನೆಯ ಓವರ್ ನಲ್ಲಿ ಹ್ಯಾಟ್ರಿಕ್ ಸಿಕ್ಸ್: ಶ್ರೀಲಂಕಾ XI ವಿರುದ್ಧ ಭಾರತಕ್ಕೆ ಅದ್ಭುತ ಗೆಲುವು ತಂದುಕೊಟ್ಟ ಸಿರಾಜ್; ಬ್ಯಾಟ್ ಪರೀಕ್ಷಿಸಿದ ಲಂಕನ್ನರು!

ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗಾಗಿ ಮೊಹಮ್ಮದ್ ರಫಿ ಹಾಡು ಹಾಡಿದ ಸೋನು ನಿಗಮ್, video!