ರಾಹುಲ್ ಗಾಂಧಿ 
ದೇಶ

ಪೌರತ್ವ ಮಸೂದೆ ಮೂಲಕ ಭಾರತೀಯ ಸಂವಿಧಾನದ ಮೇಲೆ ದಾಳಿ: ರಾಹುಲ್ ಗಾಂಧಿ

ಪೌರತ್ವ (ತಿದ್ದುಪಡಿ) ಮಸೂದೆ ಮೂಲಕ ಭಾರತೀಯ ಸಂವಿಧಾನದ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ. 

ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆ ಮೂಲಕ ಭಾರತೀಯ ಸಂವಿಧಾನದ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಪೌರತ್ವ ಮಸೂದೆಯೊಂದು ಭಾರತೀಯ ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಇದನ್ನು ಯಾರೇ ಬೆಂಬಲಿಸಿದರೂ ಅದೊಂದು ದಾಳಿ ಹಾಗೂ ನಮ್ಮ ದೇಶದ ಅಡಿಪಾಯದ ಮೇಲೆ ನಾಶಪಡಿಸುವ ಯತ್ನವಾಗಿದೆ ಎಂದು ಹೇಳಿದ್ದಾರೆ. 

ವಿವಾದಿತ ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಮಸೂದೆಗೆ ಲೋಕಸಭೆ ಅಸ್ತು ಎಂದು ಹೇಳಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನಗಳಲ್ಲಿನ ಧಾರ್ಮಿಕ ಉಪದ್ರವಗಳಿಂದ ಬೇಸತ್ತು, ಅಲ್ಲಿಂದ ಭಾರತಕ್ಕೆ ಬಂದಿರುವ ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತರಿಗೆ ಭಾರತೀಯ ಪೌರತ್ವ ಉದ್ದೇಶವು ಮಸೂದೆಗೆ ಇದೆ. ಇನ್ನು ವಿಧೇಯಕವು ರಾಜ್ಯಸಭೆಯಲ್ಲಿ ಮಂಡನೆಯಾಗಿ ಅಲ್ಲೂ ಅನುಮೋದನೆ ಪಡೆದುಕೊಂಡಿದ್ದೇ ಆದರೆ, ಇವರಿಗೆಲ್ಲಾ ಬಾರತೀಯ ಪೌರತ್ವ ಲಭಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT