ಸಾಂದರ್ಭಿಕ ಚಿತ್ರಗಳು 
ದೇಶ

ಡೀಮಾನೆಟೈಸೇಶನ್ ನಿಂದ ಚಲಾವಣೆಯಲ್ಲಿರುವ ಕರೆನ್ಸಿ ನೋಟುಗಳ ಬೆಳವಣಿಗೆ ಕುಂಠಿತ!

ನೋಟು ಅಮಾನ್ಯೀಕರಣದಿಂದ ಚಲಾವಣೆಯಲ್ಲಿರುವ ಕರೆನ್ಸಿ ನೋಟುಗಳ ಬೆಳವಣಿಗೆ ಕುಂಠಿತವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ನವ ದೆಹಲಿ: ನೋಟು ಅಮಾನ್ಯೀಕರಣದಿಂದ ಚಲಾವಣೆಯಲ್ಲಿರುವ ಕರೆನ್ಸಿ ನೋಟುಗಳ ಬೆಳವಣಿಗೆ ಕುಂಠಿತವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಲಿಖಿತ ಉತ್ತರ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನವೆಂಬರ್ 4, 2016 ರಲ್ಲಿ 17,74,187 ಕೋಟಿ ರೂ. ಕರೆನ್ಸಿ ನೋಟುಗಳ ಚಲಾವಣೆಯಾಗಿತ್ತು. ಅದು ಡಿಸೆಂಬರ್ 2 , 2019 ವೇಳೆಗೆ  22,35,648 ಕೋಟಿ ರೂ.ಗೆ ಹೆಚ್ಚಳವಾಗಿದೆ. 

ಅಕ್ಟೋಬರ್ 2014ರಿಂದ ಅಕ್ಟೋಬರ್ 2016ರವರೆಗೂ ವರ್ಷಕ್ಕೆ ಸರಾಸರಿ ಶೇ. 14. 51ರಲ್ಲಿ  ನೋಟುಗಳ ಬೆಳವಣಿಗೆ ಹೆಚ್ಚಾಗಿದ್ದು, ಡಿಸೆಂಬರ್ 2ರ ವೇಳೆಗೆ 25, 40, 253 ಕೋಟಿ ರೂ. ಗೆ. ಏರಿಕೆ ಆಗಿದೆ. ನೋಟು ಅಮಾನ್ಯೀಕರಣ ನಂತರ 3, 04, 605 ಕೋಟಿಯಷ್ಟು ನೋಟುಗಳ ಚಲಾವಣೆ ಕಡಿಮೆಯಾಗಿದೆ ಎಂದು ಸಚಿವರು ಹೇಳಿದರು. 

ನಗದು ರಹಿತ ಆರ್ಥಿಕತೆ ಹಾಗೂ  ಡಿಜಿಟಲೀಕರಣ 3,060,605 ಕೋಟಿ ರೂ.ಗಳಷ್ಟು ಕರೆನ್ಸಿ ನೋಟುಗಳ ಚಲಾವಣೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿದೆ" ಎಂದು ಸಚಿವರು ಹೇಳಿದರು.

ನಕಲಿ ನೋಟು, ಕಪ್ಪು ಹಣ ತಡೆಗಟ್ಟುವ ನಿಟ್ಟಿನಲ್ಲಿ  ನವೆಂಬರ್ 8, 2016ರಲ್ಲಿ ಸರ್ಕಾರ 1 ಸಾವಿರ ಹಾಗೂ 500 ರೂ. ಮೌಲ್ಯದ ನೋಟುಗಳನ್ನು ಸರ್ಕಾರ ನಿಷೇಧಿಸಿತ್ತು.

2016-17ರಲ್ಲಿ 7, 62, 072 ರೂ, 2017-18ರಲ್ಲಿ 5, 22, 783 ಹಾಗೂ 2018-19ರಲ್ಲಿ 3, 17,389 ರೂ. ನಕಲಿ ನೋಟುಗಳು ಪತ್ತೆಯಾಗಿವೆ ಎಂದು ಆರ್ ಬಿಐ ತಿಳಿಸಿರುವುದಾಗಿ ನಿರ್ಮಲಾ ಸೀತಾರಾಮನ್ ಸದನಕ್ಕೆ ಮಾಹಿತಿ ನೀಡಿದರು. 

ನೋಟು ಅಮಾನ್ಯೀಕರಣದಿಂದ ನಕಲಿ ನೋಟುಗಳ ತಡೆಗಟ್ಟುವುದರ ಜೊತೆಗೆ ಕಳೆದ ಕೆಲ ವರ್ಷಗಳಲ್ಲಿ ಡಿಜಿಟಲ್ ವ್ಯವಹಾರ ಹೆಚ್ಚಳವಾಗಿರುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!