ಸಾಂದರ್ಭಿಕ ಚಿತ್ರಗಳು 
ದೇಶ

ಡೀಮಾನೆಟೈಸೇಶನ್ ನಿಂದ ಚಲಾವಣೆಯಲ್ಲಿರುವ ಕರೆನ್ಸಿ ನೋಟುಗಳ ಬೆಳವಣಿಗೆ ಕುಂಠಿತ!

ನೋಟು ಅಮಾನ್ಯೀಕರಣದಿಂದ ಚಲಾವಣೆಯಲ್ಲಿರುವ ಕರೆನ್ಸಿ ನೋಟುಗಳ ಬೆಳವಣಿಗೆ ಕುಂಠಿತವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ನವ ದೆಹಲಿ: ನೋಟು ಅಮಾನ್ಯೀಕರಣದಿಂದ ಚಲಾವಣೆಯಲ್ಲಿರುವ ಕರೆನ್ಸಿ ನೋಟುಗಳ ಬೆಳವಣಿಗೆ ಕುಂಠಿತವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಲಿಖಿತ ಉತ್ತರ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನವೆಂಬರ್ 4, 2016 ರಲ್ಲಿ 17,74,187 ಕೋಟಿ ರೂ. ಕರೆನ್ಸಿ ನೋಟುಗಳ ಚಲಾವಣೆಯಾಗಿತ್ತು. ಅದು ಡಿಸೆಂಬರ್ 2 , 2019 ವೇಳೆಗೆ  22,35,648 ಕೋಟಿ ರೂ.ಗೆ ಹೆಚ್ಚಳವಾಗಿದೆ. 

ಅಕ್ಟೋಬರ್ 2014ರಿಂದ ಅಕ್ಟೋಬರ್ 2016ರವರೆಗೂ ವರ್ಷಕ್ಕೆ ಸರಾಸರಿ ಶೇ. 14. 51ರಲ್ಲಿ  ನೋಟುಗಳ ಬೆಳವಣಿಗೆ ಹೆಚ್ಚಾಗಿದ್ದು, ಡಿಸೆಂಬರ್ 2ರ ವೇಳೆಗೆ 25, 40, 253 ಕೋಟಿ ರೂ. ಗೆ. ಏರಿಕೆ ಆಗಿದೆ. ನೋಟು ಅಮಾನ್ಯೀಕರಣ ನಂತರ 3, 04, 605 ಕೋಟಿಯಷ್ಟು ನೋಟುಗಳ ಚಲಾವಣೆ ಕಡಿಮೆಯಾಗಿದೆ ಎಂದು ಸಚಿವರು ಹೇಳಿದರು. 

ನಗದು ರಹಿತ ಆರ್ಥಿಕತೆ ಹಾಗೂ  ಡಿಜಿಟಲೀಕರಣ 3,060,605 ಕೋಟಿ ರೂ.ಗಳಷ್ಟು ಕರೆನ್ಸಿ ನೋಟುಗಳ ಚಲಾವಣೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿದೆ" ಎಂದು ಸಚಿವರು ಹೇಳಿದರು.

ನಕಲಿ ನೋಟು, ಕಪ್ಪು ಹಣ ತಡೆಗಟ್ಟುವ ನಿಟ್ಟಿನಲ್ಲಿ  ನವೆಂಬರ್ 8, 2016ರಲ್ಲಿ ಸರ್ಕಾರ 1 ಸಾವಿರ ಹಾಗೂ 500 ರೂ. ಮೌಲ್ಯದ ನೋಟುಗಳನ್ನು ಸರ್ಕಾರ ನಿಷೇಧಿಸಿತ್ತು.

2016-17ರಲ್ಲಿ 7, 62, 072 ರೂ, 2017-18ರಲ್ಲಿ 5, 22, 783 ಹಾಗೂ 2018-19ರಲ್ಲಿ 3, 17,389 ರೂ. ನಕಲಿ ನೋಟುಗಳು ಪತ್ತೆಯಾಗಿವೆ ಎಂದು ಆರ್ ಬಿಐ ತಿಳಿಸಿರುವುದಾಗಿ ನಿರ್ಮಲಾ ಸೀತಾರಾಮನ್ ಸದನಕ್ಕೆ ಮಾಹಿತಿ ನೀಡಿದರು. 

ನೋಟು ಅಮಾನ್ಯೀಕರಣದಿಂದ ನಕಲಿ ನೋಟುಗಳ ತಡೆಗಟ್ಟುವುದರ ಜೊತೆಗೆ ಕಳೆದ ಕೆಲ ವರ್ಷಗಳಲ್ಲಿ ಡಿಜಿಟಲ್ ವ್ಯವಹಾರ ಹೆಚ್ಚಳವಾಗಿರುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT