ಅಮಿತ್ ಶಾ 
ದೇಶ

ಮೋದಿ ಸರ್ಕಾರದಡಿ ಯಾರೂ ಭಯಪಡಬೇಕಾಗಿಲ್ಲ, ಯಾರಿಗೂ ಕಿರುಕುಳ ನೀಡುವುದಿಲ್ಲ: ಅಮಿತ್ ಶಾ ಅಭಯ 

ಯಾವುದೇ ಧರ್ಮಕ್ಕೆ ಸೇರಿದ ಜನರು ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಭಯಪಡುವ ಅಗತ್ಯವಿಲ್ಲ. ಪೌರತ್ವ (ತಿದ್ದುಪಡಿ)ಮಸೂದೆಯಿಂದ ನೆರೆಯ ದೇಶಗಳಿಂದ ಇಷ್ಟು ದಿನ ಕಿರುಕುಳ ಅನುಭವಿಸುತ್ತಿದ್ದ ಅಲ್ಪಸಂಖ್ಯಾತರಿಗೆ ಈ ಮಸೂದೆ ಮುಕ್ತಿ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ:ಯಾವುದೇ ಧರ್ಮಕ್ಕೆ ಸೇರಿದ ಜನರು ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಭಯಪಡುವ ಅಗತ್ಯವಿಲ್ಲ. ಪೌರತ್ವ (ತಿದ್ದುಪಡಿ)ಮಸೂದೆಯಿಂದ ನೆರೆಯ ದೇಶಗಳಿಂದ ಇಷ್ಟು ದಿನ ಕಿರುಕುಳ ಅನುಭವಿಸುತ್ತಿದ್ದ ಅಲ್ಪಸಂಖ್ಯಾತರಿಗೆ ಈ ಮಸೂದೆ ಮುಕ್ತಿ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.


ಮೋದಿ ಸರ್ಕಾರ ಖಂಡಿತವಾಗಿಯೂ ದೇಶಾದ್ಯಂತ ರಾಷ್ಟ್ರೀಯ ನಾಗರಿಕ ದಾಖಲಾತಿ(ಎನ್ ಆರ್ ಸಿ) ಜಾರಿಗೆ ತರುತ್ತದೆ, ಇದು ಜಾರಿಗೆ ಬಂದಾಗ ಮಾತ್ರ ಒಬ್ಬರೇ ಒಬ್ಬರು ಅಕ್ರಮ ವಲಸಿಗರು ದೇಶದಲ್ಲಿ ಉಳಿಯುವುದಿಲ್ಲ ಎಂದರು.


ಕೇಂದ್ರ ಸರ್ಕಾರದ ಉದ್ದೇಶಿತ ಮಸೂದೆ ಕುರಿತು ನಿನ್ನೆ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಮುನ್ನ ಸುದೀರ್ಘ ಚರ್ಚೆ ನಡೆಯಿತು, ಈ ಸಂದರ್ಭದಲ್ಲಿ ಸದನಕ್ಕೆ ವಿವರಣೆ ನೀಡಿದ ಅಮಿತ್ ಶಾ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ನಾಗರಿಕತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಯಿಂದ ಇಲ್ಲಿನ ಅಲ್ಪಸಂಖ್ಯಾತರಿಗೆ ತೊಂದರೆಯಾಗುತ್ತದೆ, ಅವರ ಮೇಲೆ ಕಿರುಕುಳ ನೀಡಲಾಗುತ್ತದೆ ಎಂಬ ಭಯವನ್ನು ಬಿಡಬೇಕು. ಅಕ್ರಮ ವಲಸಿಗರು ಮತ್ತು ಈ ಮೂರು ದೇಶಗಳಿಂದ ಧಾರ್ಮಿಕ ಕಿರುಕುಳ ಅನುಭವಿಸಿ ಇಲ್ಲಿಗೆ ಆಶ್ರಯ ಪಡೆಯಲು ಬಂದಿರುವವರ ಮಧ್ಯೆ ವ್ಯತ್ಯಾಸಗಳಿವೆ ಎಂದರು.


1947ರಲ್ಲಿ ಭಾರತ ಧರ್ಮದ ಆಧಾರದ ಮೇಲೆ ವಿಭಜನೆಯಾಗಿರದಿದ್ದರೆ ಇಂದು ಪೌರತ್ವ ತಿದ್ದುಪಡಿ ಮಸೂದೆಯ ಅಗತ್ಯವಿರುತ್ತಿರಲಿಲ್ಲ. 1951ರಲ್ಲಿ ಭಾರತದಲ್ಲಿ ಶೇಕಡಾ 9.8ರಷ್ಟಿದ್ದ ಮುಸ್ಲಿಂ ಜನಸಂಖ್ಯೆ 2011ರಲ್ಲಿ ಶೇಕಡಾ 14.8ಕ್ಕೆ ಏರಿಕೆಯಾಗಿದೆ. ಅದೇ ಹಿಂದೂ ಧರ್ಮೀಯರ ಸಂಖ್ಯೆ 1951ರಲ್ಲಿದ್ದ ಶೇಕಡಾ 84ರಿಂದ 2011ಕ್ಕೆ ಶೇಕಡಾ 79ಕ್ಕೆ ಇಳಿಕೆಯಾಗಿದೆ ಎಂದರು.
ಮೋದಿ ಸರ್ಕಾರದ ಧರ್ಮವೊಂದೇ ಅದು ಸಂವಿಧಾನ, ನಿರಾಶ್ರಿತರನ್ನು ಕಾಪಾಡುವ ಹಲವು ಕಾನೂನುಗಳು ಇರುವುದರಿಂದ ಭಾರತಕ್ಕೆ ನಿರಾಶ್ರಿತರ ನೀತಿಯ ಅವಶ್ಯಕತೆಯಿಲ್ಲ ಎಂದು ಸಹ ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಅಕ್ರಮದ ಹಾದಿ ಹಿಡಿಯದಿರಲಿ: ಗೃಹ ಸಚಿವ ಪರಮೇಶ್ವರರ "ಧ್ವಂಸ" ಹೇಳಿಕೆಗೆ ಪಿ. ಚಿದಂಬರಂ ಕಿಡಿ!

ತಾಳ್ಮೆ ಕಳೆದುಕೊಂಡು ಪುಟಿನ್-ಎರ್ಡೋಗನ್ ನಡುವಿನ ರಹಸ್ಯ ಸಭೆಗೆ ನುಗ್ಗಿದ ಪಾಕ್ ಪ್ರಧಾನಿ; ಮುಂದೇನಾಯ್ತು?, Video!

'ಸಂಸ್ಕೃತದ ವ್ಯಾಕರಣ ಹುಟ್ಟಿದ್ದು ನಮ್ಮಲ್ಲೇ; ನಾವ್ಯಾಕೆ ಸಂಸ್ಕೃತ ಕಲಿಯಬಾರದು'?: Pak ವಿವಿಯಲ್ಲಿ ಮಹಾಭಾರತ, ಸಂಸ್ಕೃತದ ಕೋರ್ಸ್ ಆರಂಭ!

ರೌಡಿಶೀಟರ್‌ ಮೌಖಿಕವಾಗಿ ಕರೆಸಿಕೊಳ್ಳಲು ಬ್ರೇಕ್‌; SMS ಅಥವಾ WhatsApp ಬಳಸಿ: ಪೊಲೀಸರಿಗೆ ಹೈಕೋರ್ಟ್‌ ಸೂಚನೆ!

ಭಾರತದಲ್ಲಿ 11,718 ಕೋಟಿ ರೂ ವೆಚ್ಚದಲ್ಲಿ 'ಡಿಜಿಟಲ್ ಜನಗಣತಿ': ಕೇಂದ್ರ ಸಂಪುಟ ಅನುಮೋದನೆ!

SCROLL FOR NEXT