ಸಂಗ್ರಹ ಚಿತ್ರ 
ದೇಶ

ಪೌರತ್ವ ಮಸೂದೆಗೆ ಬೆಂಬಲ; ನಿತೀಶ್, ಜೆಡಿಯು ವಿರುದ್ಧ ಪ್ರಶಾಂತ್ ಕಿಶೋರ್ ಅಸಮಾಧಾನ

ಕೇಂದ್ರ ಗೃಹಸಚಿವ ಅಮಿತ್ ಶಾ ಮಂಡಿಸಿದ ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡಿದ ವಿಚಾರವಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಜೆಡಿಯು ಪಕ್ಷದ ವಿರುದ್ಧ ಖ್ಯಾತ ರಾಜಕೀಯ ತಂತ್ರಜ್ಞ ಹಾಗೂ ಜೆಡಿಯು ಮುಖಂಡ ಪ್ರಶಾಂತ್ ಕಿಶೋರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಮಂಡಿಸಿದ ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡಿದ ವಿಚಾರವಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಜೆಡಿಯು ಪಕ್ಷದ ವಿರುದ್ಧ ಖ್ಯಾತ ರಾಜಕೀಯ ತಂತ್ರಜ್ಞ ಹಾಗೂ ಜೆಡಿಯು ಮುಖಂಡ ಪ್ರಶಾಂತ್ ಕಿಶೋರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, 'ಧರ್ಮದ ಆಧಾರದ ಮೇಲೆ ನಾಗರಿಕರ ಹಕ್ಕುಗಳ ಕುರಿತು ತಾರತಮ್ಯ ಮಾಡುತ್ತಿರುವ ಪೌರತ್ವ ತಿದ್ದುಪಡಿ ಮಸೂದೆಗೆ ಜೆಡಿಯು ಬೆಂಬಲ ವ್ಯಕ್ತಪಡಿಸಿರುವುದನ್ನು ನೋಡಿ ನನಗೆ ಬೇಸರವಾಯಿತು. ಮೊದಲ ಪುಟದಲ್ಲಿ ಮೂರು ಬಾರಿ ಜಾತ್ಯತೀತ ಎಂಬ ಪದವನ್ನು ಹೊಂದಿರುವ ಪಕ್ಷದ ಸಂವಿಧಾನ ಹಾಗೂ ಗಾಂಧಿವಾದಿ ಆದರ್ಶಗಳಿಂದ ಮಾರ್ಗದರ್ಶಿಸಲ್ಪಟ್ಟ ನಾಯಕತ್ವಕ್ಕೆ ಇದು ಅಸಂಗತವಾಗಿದೆ ಎಂದು ಕಿಶೋರ್ ಟ್ವೀಟ್ ಮಾಡಿದ್ದಾರೆ.

ಇನ್ನು ನಿನ್ನೆ ರಾತ್ರಿ ಲೋಕಸಭೆಯಲ್ಲಿ ಮಂಡಿಸಲಾದ ಪೌರತ್ವ ತಿದ್ದುಪಡಿ ಮಸೂದೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸಹಿತ ಹಲವು ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದವು. ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾಗಿರುವ ಅಲ್ಪ ಸಂಖ್ಯಾತರಿಗೆ ಭಾರತೀಯ ಪೌರತ್ವದ ಭರವಸೆ ನೀಡುತ್ತಿರುವ ಕಾರಣ ಪೌರತ್ವ ಮಸೂದೆಗೆ ನಮ್ಮ ಪಕ್ಷ ಬೆಂಬಲ ಸೂಚಿಸುತ್ತದೆ ಎಂದು ಜೆಡಿಯು ಸಂಸದ ರಾಜೀವ್ ರಂಜನ್ ಸಿಂಗ್ ಲೋಕಸಭೆಯಲ್ಲಿ ತಿಳಿಸಿದ್ದರು. ಅದರೀಗ ಅವರದೇ ಪಕ್ಷದ ಮುಖಂಡ ಪ್ರಶಾಂತ್ ಕಿಶೋರ್ ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ದುಬೈನಲ್ಲಿ ಮತ್ತೆ ಸ್ಫೋಟ: ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬಳಿ ದಟ್ಟ ಕಪ್ಪು ಹೊಗೆ!

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

ಖಮೇನಿ ಪತ್ನಿ ಸತ್ತಿದ್ದಾರಾ ಅಥವಾ ಬದುಕಿದ್ದಾರಾ? ಸ್ಪಷ್ಟನೆ ಕೊಟ್ಟ ಇರಾನ್ ಮಾಧ್ಯಮಗಳು!

SCROLL FOR NEXT