ಸಂಗ್ರಹ ಚಿತ್ರ 
ದೇಶ

ಹೈದರಾಬಾದ್ ಎನ್ಕೌಂಟರ್: ಡಿ.13ರವರೆಗೂ ಮೃತದೇಹಗಳ ರಕ್ಷಿಸಿ- ಪೊಲೀಸರಿಗೆ 'ಹೈ' ಸೂಚನೆ

ಪೊಲೀಸರ ಎನ್'ಕೌಂಟರ್'ನಲ್ಲಿ ಹತ್ಯೆಯಾದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಶವಗಳನ್ನು ಡಿ.13ರವರೆಗೂ ರಕ್ಷಣೆ ಮಾಡುವಂತೆ ಪೊಲೀಸರಿಗೆ ಹೈದರಬಾದ್ ಹೈಕೋರ್ಟ್ ಸೂಚನೆ ನೀಡಿದೆ. 

ಹೈದರಾಬಾದ್: ಪೊಲೀಸರ ಎನ್'ಕೌಂಟರ್'ನಲ್ಲಿ ಹತ್ಯೆಯಾದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಶವಗಳನ್ನು ಡಿ.13ರವರೆಗೂ ರಕ್ಷಣೆ ಮಾಡುವಂತೆ ಪೊಲೀಸರಿಗೆ ಹೈದರಬಾದ್ ಹೈಕೋರ್ಟ್ ಸೂಚನೆ ನೀಡಿದೆ. 

ಆರೋಪಿಗಳ ಮೇಲೆ ಪೊಲೀಸರು ನಡೆಸಿದ ಎನ್'ಕೌಂಟರ್ ವಿರುದ್ಧ ಕೆಲ ದಿನಗಳ ಹಿಂದಷ್ಟೇ ನ್ಯಾಯಾಲಯದಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿದ್ದವು. 

ಈ ಅರ್ಜಿಯನ್ನು ಪರಿಶೀಲನೆ ನಡೆಸಿರುವ ನ್ಯಾಯಾಲಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದು, ಡಿ.13ರವರೆಗೂ ಆರೋಪಿಗಳ ಮೃತದೇಹಗಳನ್ನು ರಕ್ಷಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. 

ಈ ನಡುವೆ ಮೃತದೇಹಗಳನ್ನು ರಕ್ಷಣೆ ಮಾಡುವ ಸೌಲಭ್ಯಗಳು ಮಹಬೂಬ್ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಏರ್ ಆ್ಯಂಬುಲೆನ್ಸ್ ಮೂಲಕ ಮೃತದೇಹಗಳನ್ನು ಹೈದರಾಬಾದ್ ನಗರದ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚನೆ ನ್ಯಾಯಾಲಯ ಸೂಚನೆ ನೀಡಿದೆ. 

ಇದಲ್ಲದೆ, ಎನ್'ಕೌಂಟರ್ ವೇಳೆ ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ಸೂಚನೆಗಳನ್ನು ಪೊಲೀಸರು ಅನುಸರಿಸಿದ್ದಾರೆಯೇ ಎಂಬದರ ಕುರಿತು ಸಾಕ್ಷ್ಯಗಳನ್ನು ಒದಗಿಸುವಂತೆಯೂ ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT