ಸಂಗ್ರಹ ಚಿತ್ರ 
ದೇಶ

ಹೈದರಾಬಾದ್ ಎನ್ಕೌಂಟರ್: ಡಿ.13ರವರೆಗೂ ಮೃತದೇಹಗಳ ರಕ್ಷಿಸಿ- ಪೊಲೀಸರಿಗೆ 'ಹೈ' ಸೂಚನೆ

ಪೊಲೀಸರ ಎನ್'ಕೌಂಟರ್'ನಲ್ಲಿ ಹತ್ಯೆಯಾದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಶವಗಳನ್ನು ಡಿ.13ರವರೆಗೂ ರಕ್ಷಣೆ ಮಾಡುವಂತೆ ಪೊಲೀಸರಿಗೆ ಹೈದರಬಾದ್ ಹೈಕೋರ್ಟ್ ಸೂಚನೆ ನೀಡಿದೆ. 

ಹೈದರಾಬಾದ್: ಪೊಲೀಸರ ಎನ್'ಕೌಂಟರ್'ನಲ್ಲಿ ಹತ್ಯೆಯಾದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಶವಗಳನ್ನು ಡಿ.13ರವರೆಗೂ ರಕ್ಷಣೆ ಮಾಡುವಂತೆ ಪೊಲೀಸರಿಗೆ ಹೈದರಬಾದ್ ಹೈಕೋರ್ಟ್ ಸೂಚನೆ ನೀಡಿದೆ. 

ಆರೋಪಿಗಳ ಮೇಲೆ ಪೊಲೀಸರು ನಡೆಸಿದ ಎನ್'ಕೌಂಟರ್ ವಿರುದ್ಧ ಕೆಲ ದಿನಗಳ ಹಿಂದಷ್ಟೇ ನ್ಯಾಯಾಲಯದಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿದ್ದವು. 

ಈ ಅರ್ಜಿಯನ್ನು ಪರಿಶೀಲನೆ ನಡೆಸಿರುವ ನ್ಯಾಯಾಲಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದು, ಡಿ.13ರವರೆಗೂ ಆರೋಪಿಗಳ ಮೃತದೇಹಗಳನ್ನು ರಕ್ಷಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. 

ಈ ನಡುವೆ ಮೃತದೇಹಗಳನ್ನು ರಕ್ಷಣೆ ಮಾಡುವ ಸೌಲಭ್ಯಗಳು ಮಹಬೂಬ್ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಏರ್ ಆ್ಯಂಬುಲೆನ್ಸ್ ಮೂಲಕ ಮೃತದೇಹಗಳನ್ನು ಹೈದರಾಬಾದ್ ನಗರದ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚನೆ ನ್ಯಾಯಾಲಯ ಸೂಚನೆ ನೀಡಿದೆ. 

ಇದಲ್ಲದೆ, ಎನ್'ಕೌಂಟರ್ ವೇಳೆ ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ಸೂಚನೆಗಳನ್ನು ಪೊಲೀಸರು ಅನುಸರಿಸಿದ್ದಾರೆಯೇ ಎಂಬದರ ಕುರಿತು ಸಾಕ್ಷ್ಯಗಳನ್ನು ಒದಗಿಸುವಂತೆಯೂ ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT