ಪಿ ಚಿದಂಬರಂ 
ದೇಶ

ಪೌರತ್ವ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿದರೆ ಅದಕ್ಕೆ ತಕ್ಕ ಬೆಲೆಯನ್ನು ನಾವು ತೆರಬೇಕಾಗುತ್ತದೆ: ಪಿ ಚಿದಂಬರಂ 

ನಾಗರಿಕ(ತಿದ್ದುಪಡಿ)ಮಸೂದೆ 2019 ನಿಸ್ಸಂಶಯವಾಗಿ ಅಸಂವಿಧಾನಿಕವಾದದ್ದು ಸಂಸತ್ತಿನಲ್ಲಿ ಅದು ಅನುಮೋದನೆಗೊಂಡರೆ ಹೋರಾಟ ಸುಪ್ರೀಂ ಕೋರ್ಟ್ ಗೆ ಹೋಗುತ್ತದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಪಿ ಚಿದಂಬರಂ ಹೇಳಿದ್ದಾರೆ. 

ನವದೆಹಲಿ: ನಾಗರಿಕ(ತಿದ್ದುಪಡಿ)ಮಸೂದೆ 2019 ನಿಸ್ಸಂಶಯವಾಗಿ ಅಸಂವಿಧಾನಿಕವಾದದ್ದು ಸಂಸತ್ತಿನಲ್ಲಿ ಅದು ಅನುಮೋದನೆಗೊಂಡರೆ ಹೋರಾಟ ಸುಪ್ರೀಂ ಕೋರ್ಟ್ ಗೆ ಹೋಗುತ್ತದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಪಿ ಚಿದಂಬರಂ ಹೇಳಿದ್ದಾರೆ.


ನ್ಯಾಯವಾದಿಗಳು ಮತ್ತು ನ್ಯಾಯಾಧೀಶರ ಪರವಾಗಿ ಚುನಾಯಿತ ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 


ಸರ್ಕಾರದ ಈ ಉದ್ದೇಶಿತ ತಿದ್ದುಪಡಿ ಮಸೂದೆಯಡಿ 2014, ಡಿಸೆಂಬರ್ 31ರವರೆಗೆ ಧಾರ್ಮಿಕ ಕಿರುಕುಳ ಅನುಭವಿಸಿ ದೇಶ ತೊರೆದು ಭಾರತಕ್ಕೆ ಬಂದ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಸಿಖ್, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಸ್ತಿಯನ್ನರು ಭಾರತದ ನಾಗರಿಕತ್ವ ಪಡೆಯಲಿದ್ದಾರೆ. ಅವರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುವುದಿಲ್ಲ.


ತಿದ್ದುಪಡಿ ಮಸೂದೆಗೆ ನಿನ್ನೆ ಲೋಕಸಭೆಯಲ್ಲಿ 311 ಸದಸ್ಯರು ಪರವಾಗಿ ಮತ್ತು 80 ಸದಸ್ಯರು ವಿರುದ್ಧವಾಗಿ ಮತ ಹಾಕಿದ್ದರು.
ನಾಗರಿಕ ತಿದ್ದುಪಡಿ ಮಸೂದೆ ಅಸಂವಿಧಾನಿಕ. ಸಂಸತ್ತಿನಲ್ಲಿ ಅಸಂವಿಧಾನಿಕ ಮಸೂದೆ ಅನುಮೋದನೆಯಾದರೆ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗಲಾಗುತ್ತದೆ. ನ್ಯಾಯಾಧೀಶರು ಮತ್ತು ನ್ಯಾಯವಾದಿಗಳ ಪರವಾಗಿ ಚುನಾಯಿತ ಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದ್ದಾರೆ. 


ದೇಶದ ಜನರು ಮತ್ತು ದೇಶದ ಹಿತಾಸಕ್ತಿಯನ್ನು ಬಲಿಕೊಡುವ ಪಕ್ಷಕ್ಕೆ ಬಹುಮತ ನೀಡಿ ಅಧಿಕಾರ ನೀಡಿದ್ದಕ್ಕೆ ನಾವು ಬೆಲೆ ತೆರಬೇಕಾಗುತ್ತದೆ ಎಂದು ಸಹ ಚಿದಂಬರಂ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT