ಸಂಗ್ರಹ ಚಿತ್ರ 
ದೇಶ

ಪೌರತ್ವ ಸಾಬೀತು ಪಡಿಸಲು ಯಾವುದೇ ದಾಖಲೆ ಸಲ್ಲಿಸುವುದಿಲ್ಲ: ಸಸಿಕಾಂತ್ ಸೆಂಥಿಲ್

ತನ್ನ ಪೌರತ್ವ ಸಾಬೀತು ಪಡಿಸಲು ಯಾವುದೇ ರೀತಿಯ ದಾಖಲೆ ಸಲ್ಲಿಸುವುದಿಲ್ಲ ಎಂದು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಐ.ಎ.ಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಖಾರವಾಗಿ ಪತ್ರ ಬರೆದಿದ್ದಾರೆ.

ಬೆಂಗಳೂರು: ತನ್ನ ಪೌರತ್ವ ಸಾಬೀತು ಪಡಿಸಲು ಯಾವುದೇ ರೀತಿಯ ದಾಖಲೆ ಸಲ್ಲಿಸುವುದಿಲ್ಲ ಎಂದು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಐ.ಎ.ಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಖಾರವಾಗಿ ಪತ್ರ ಬರೆದಿದ್ದಾರೆ.

ಸಿಎಬಿ(ಪೌರತ್ವ ಮಸೂದೆ) ಅಂಗೀಕಾರವಾದ ದಿನ “ಆಧುನಿಕ ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಿದೆ. ತಾನು ಪೌರತ್ವ ಮಸೂದೆಯನ್ನು ಸ್ವೀಕರಿಸುವುದಿಲ್ಲ, ಭಾರತೀಯನೆಂದು ಪೌರತ್ವವನ್ನು ಸಾಬೀತುಪಡಿಸಲು ಅಗತ್ಯವಾದ ದಾಖಲೆಗಳನ್ನು ಸಲ್ಲಿಸುವುದಿಲ್ಲ ಮತ್ತು ನನ್ನ ಅಸಹಕಾರಕ್ಕಾಗಿ ಭಾರತ ದೇಶವು ನನ್ನ ಮೇಲೆ ಕ್ರಮ ಕೈಗೊಂಡರೆ ಸ್ವೀಕರಿಸುತ್ತೇನೆ ಎಂದು ಸೆಂಥಿಲ್ ಪತ್ರದಲ್ಲಿ ಸವಾಲು ಹಾಕಿದ್ದಾರೆ.

ಈ ದೇಶದಲ್ಲಿ ಹುಟ್ಟಿ ಬೆಳೆದು ನಾನು ನನ್ನ ಪೌರತ್ವ ಸಾಬೀತು ಪಡಿಸಬೇಕಾಗಿರುವುದು ದುರದೃಷ್ಟಕರ. ನನ್ನ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯವಾದ ದಾಖಲೆಗಳನ್ನು ಸಲ್ಲಿಸದೆ ಎನ್ಆರ್ ಸಿ ಗಣತಿಗೆ ಅಸಹಕಾರ ನೀಡುತ್ತೇನೆ. ಒಂದು ವೇಳೆ ನಾನು ಈ ದೇಶದ ನಾಗರೀಕನಲ್ಲ ಎಂದು ಗುರುತಿಸಿದರೆ ನೀವು ನಿರ್ಮಿಸುತ್ತಿರುವ ಅನೇಕ “ವಲಸೆ ಕೇಂದ್ರ” ಭರ್ತಿ ಮಾಡಲು ನನಗೆ ಸಂತೋಷವಾಗುತ್ತದೆ. ಯಾಕೆಂದರೆ ಸರ್ಕಾರ ದೇಶಾದ್ಯಂತ ಪ್ರತಿ ಹೆಜ್ಜೆಗೂ ಇಂತಹ ಕೇಂದ್ರಗಳನ್ನು ತೆರೆಯಬೇಕಾದಿತು. ಹೀಗಾಗಿ ಜನ ವಿರೋಧಿ ಮಸೂದೆಯ ಬಗ್ಗೆ ಮೌನವಾಗಿರುವುದಕ್ಕಿಂತ ಇದನ್ನು ವಿರೋಧಿಸಿ ನೀವು ಕೈಗೊಳ್ಳುವ ಕ್ರಮವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಸೆಂಥಿಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT