ರಾಜ್ಯಸಭೆ(ಸಂಗ್ರಹ ಚಿತ್ರ) 
ದೇಶ

ಪೌರತ್ವ ತಿದ್ದುಪಡಿ ಮಸೂದೆ: ಇಂದು  ಮಧ್ಯಾಹ್ನ 12 ಗಂಟೆಗೆ ಅಮಿತ್ ಶಾರಿಂದ ರಾಜ್ಯಸಭೆಯಲ್ಲಿ ಮಂಡನೆ 

ಲೋಕಸಭೆಯಲ್ಲಿ ಅನುಮೋದನೆಗೊಂಡಿರುವ ನಾಗರಿಕ ತಿದ್ದುಪಡಿ ಮಸೂದೆ 2019 ಬುಧವಾರ ಮಧ್ಯಾಹ್ನ 12 ಗಂಟೆಗೆ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. 

ನವದೆಹಲಿ: ಲೋಕಸಭೆಯಲ್ಲಿ ಅನುಮೋದನೆಗೊಂಡಿರುವ ನಾಗರಿಕ ತಿದ್ದುಪಡಿ ಮಸೂದೆ 2019 ಬುಧವಾರ ಮಧ್ಯಾಹ್ನ 12 ಗಂಟೆಗೆ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. 


ಗೃಹ ಸಚಿವ ಅಮಿತ್ ಶಾ ಇಂದು ಮಧ್ಯಾಹ್ನ ರಾಜ್ಯಸಭೆಯಲ್ಲಿ ವಿಧೇಯಕವನ್ನು ಸದಸ್ಯರ ಒಪ್ಪಿಗೆಗೆ ಮಂಡಿಸಲಿದ್ದಾರೆ. 
ಧಾರ್ಮಿಕ ಮತ್ತು ಮತೀಯ ಕಿರುಕುಳದಿಂದ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಓಡಿಬಂದು ಭಾರತದಲ್ಲಿ ಆಶ್ರಯ ಪಡೆದುಕೊಂಡಿರುವ ಹಿಂದೂ, ಕ್ರೈಸ್ತ,ಸಿಖ್, ಬೌದ್ಧ ಮತ್ತು ಜೊರಾಸ್ಟ್ರಿಯನ್ ಧರ್ಮೀಯರಿಗೆ ಭಾರತದ ನಾಗರಿಕತ್ವ ನೀಡುವ ಮಸೂದೆ ಇದಾಗಿದೆ. 


ಇದಕ್ಕೆ ಕಳೆದ ಸೋಮವಾರ ಲೋಕಸಭೆಯಲ್ಲಿ ಬಹುಮತ ಸಿಕ್ಕಿದೆ.ಸತತ 7 ಗಂಟೆಗಳ ಕಾಲ ಲೋಕಸಭೆಯಲ್ಲಿ ನಿರಂತರವಾಗಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ವಾದ, ವಾಗ್ವಾದಗಳು ನಡೆದವು. ಕೊನೆಗೆ 311 ಮಂದಿ ಲೋಕಸಭಾ ಸದಸ್ಯರು ವಿಧೇಯಕದ ಪರವಾಗಿ ಮತ್ತು 80 ಮಂದಿ ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.


ಇಂದು ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರವಾಗಬೇಕಾದರೆ ಕೇಂದ್ರ ಸರ್ಕಾರಕ್ಕೆ 123 ಸಂಸದರ ಬೆಂಬಲ ಸಿಗಬೇಕು. ಇಲ್ಲಿನ ಸದಸ್ಯರ ಒಟ್ಟು ಸಂಖ್ಯೆ 245 ಆಗಿದೆ.


ಈ ಮಧ್ಯೆ ಇಂದಿನ ರಾಜ್ಯಸಭಾ ಕಲಾಪದಲ್ಲಿ ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

SCROLL FOR NEXT