ಗುವಾಹಟಿಯಲ್ಲಿ ನಿನ್ನೆ ವಿವಿಧ ಸಂಘಟನೆಗಳ ಪ್ರತಿಭಟನೆ 
ದೇಶ

ಪೌರತ್ವ ತಿದ್ದುಪಡಿ ಮಸೂದೆ:ಈಶಾನ್ಯ ರಾಜ್ಯಗಳಲ್ಲಿ ತೀವ್ರಗೊಂಡ ಪ್ರತಿಭಟನೆ, ತ್ರಿಪುರಾದಲ್ಲಿ ಮೊಬೈಲ್ ಸಂಪರ್ಕ ಕಡಿತ 

ಕೇಂದ್ರ ಸರ್ಕಾರದ ಉದ್ದೇಶಿತ ಪೌರತ್ವ ತಿದ್ದುಪಡಿ ಮಸೂದೆಗೆ ಈಶಾನ್ಯ ರಾಜ್ಯಗಳ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ನಿನ್ನೆಯಿಂದ ಪ್ರತಿಭಟನೆ, ಕೋಲಾಹಲ ತೀವ್ರವಾಗಿದೆ.

ಗುವಾಹಟಿ/ ಕೋಲ್ಕತ್ತಾ: ಕೇಂದ್ರ ಸರ್ಕಾರದ ಉದ್ದೇಶಿತ ಪೌರತ್ವ ತಿದ್ದುಪಡಿ ಮಸೂದೆಗೆ ಈಶಾನ್ಯ ರಾಜ್ಯಗಳ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ನಿನ್ನೆಯಿಂದ ಪ್ರತಿಭಟನೆ, ಕೋಲಾಹಲ ತೀವ್ರವಾಗಿದೆ.


ಚೀನಾ, ಬಾಂಗ್ಲಾದೇಶ, ಮೈನ್ಮಾರ್ ಮತ್ತು ಭೂತಾನ್ ದೇಶಗಳ ಜೊತೆ ಗಡಿಯನ್ನು ಹಂಚಿಕೊಂಡಿರುವ ಅಸ್ಸಾಂ ಮತ್ತು ತ್ರಿಪುರಾ ರಾಜ್ಯಗಳ ಜನರು ಮಸೂದೆ ಜಾರಿಗೆ ವಿರೋಧಿಸಿ ತೀವ್ರ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಮಸೂದೆ ದೇಶದ ಮುಸ್ಲಿಂರ ವಿರುದ್ಧವಾಗಿ ಇಲ್ಲ, ದೇಶದೊಳಗೆ ಅಕ್ರಮವಾಗಿ ಒಳನುಸುಳುಕೋರರನ್ನು ತಡೆಯಲು ಈ ಮಸೂದೆ ಅಸ್ತ್ರವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದರೂ ಕೂಡ ತ್ರಿಪುರಾದಲ್ಲಿ ಪ್ರತಿಭಟನಾಕಾರರು ಸಂಪೂರ್ಣ ಬಂದ್ ಗೆ ಕರೆ ನೀಡಿದ್ದಾರೆ. ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ತ್ರಿಪುರಾದಲ್ಲಿ 48 ಗಂಟೆಗಳ ಬಂದ್ ಗೆ ಕರೆ ನೀಡಲಾಗಿದ್ದು ಎಸ್ಎಂಎಸ್ ಮತ್ತು ಮೊಬೈಲ್ ಸಂಪರ್ಕ ಸೇವೆಯನ್ನು ಕಡಿತಗೊಳಿಸಲಾಗಿದೆ.


ಆಲ್ ಮೊರನ್ ಸ್ಟೂಡೆಂಟ್ ಯೂನಿಯನ್(ಎಎಂಎಸ್ ಯು) 48 ಗಂಟೆಗಳ ಅಸ್ಸಾಂ ಬಂದ್ ಗೆ ಕರೆ ಕೊಟ್ಟಿದೆ. ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದು 6 ಸಮುದಾಯಕ್ಕೆ ಬುಡಕಟ್ಟು ಜನಾಂಗದ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿದೆ. ಇದರಿಂದ ರಾಜ್ಯದ ಹಲವೆಡೆ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ.


ನಿನ್ನೆ ನೂರಾರು ಮಹಿಳೆಯರು, ಮಕ್ಕಳು ಅಸ್ಸಾಂ ಮತ್ತು ತ್ರಿಪುರಾಗಳಲ್ಲಿ ಬೀದಿಗಳಿದು ಬೆಳಗ್ಗೆಯಿಂದ ಸಾಯಂಕಾಲದವರೆಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಚದುರಿಸಲು ದಿಬ್ರುಗರ್ ಮತ್ತು ಗುವಾಹಟಿಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಹಲವು ಬಸ್ಸುಗಳು ಪೊಲೀಸರ ರಕ್ಷಣೆಯಲ್ಲಿ ಸಂಚಾರ ನಡೆಸಬೇಕಾಯಿತು.


ಬಂದ್ ನಿಂದಾಗಿ ಕಾಜಿರಂಗಾ ನ್ಯಾಶನಲ್ ಪಾರ್ಕ್ ನಲ್ಲಿ ಹಲವು ವಿದೇಶಿ ಮತ್ತು ದೇಶೀಯ ಪ್ರವಾಸಿಗರು ಸಿಕ್ಕಿಹಾಕಿಕೊಳ್ಳಬೇಕಾಯಿತು. ಗುವಾಹಿಟಿಗೆ ಕರೆದುಕೊಂಡು ಹೋಗಲು ಸಾರ್ವಜನಿಕ ಸಾರಿಗೆ ವ್ಯವಸ್ಥೆಯಿರಲಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ Indian Army ಎಚ್ಚರಿಕೆ!

Operation Sindoor: ಪಾಕಿಸ್ತಾನದ ಐದು ಹೈಟೆಕ್ ಫೈಟರ್‌, ಎಫ್-16, ಜೆಎಫ್-17, ಅನೇಕ ಜೆಟ್‌ಗಳು ನಾಶ- IAF ಮುಖ್ಯಸ್ಥ; Video

1st Test, Day 2: ಒಂದೇ ದಿನ 3 ಶತಕ, ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ವಿರುದ್ಧ 286 ರನ್ ಮುನ್ನಡೆ!

"ಹೊಸ ಮನೆ ಗೃಹಪ್ರವೇಶಕ್ಕೆ ಯಾರಿಗೂ ಆಹ್ವಾನವಿಲ್ಲ; ನನ್ನ ಅದೃಷ್ಟದ ಮನೆ ಬೇರೆಯದ್ದೇ ಇದೆ.., 2 ಬಾರಿ ಸಿಎಂ ಆಗಲು ಅದೇ ಕಾರಣ": Siddaramaiah

1st test: ಕೊನೆಗೂ ನೀಗಿದ ಬರ, 9 ವರ್ಷಗಳ ಬಳಿಕ ತವರಿನಲ್ಲಿ ಕನ್ನಡಿಗ KL Rahul ಶತಕ!

SCROLL FOR NEXT