ದೇಶ

ಚಿನ್ಮಯಾನಂದ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿ ಜೈಲಿನಿಂದ ಬಿಡುಗಡೆ

Lingaraj Badiger

ಶಹಜಾನಪುರ್: ಸುಲಿಗೆ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಕಾನೂನು ವಿದ್ಯಾರ್ಥಿನಿ ಬುಧವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಳೆದ ಡಿಸೆಂಬರ್ 4ರಂದು ಅಲಹಬಾದ್ ಹೈಕೋರ್ಟ್ ಕಾನೂನು ವಿದ್ಯಾರ್ಥಿನಿಗೆ ಜಾಮೀನು ಮಂಜೂರು ಮಾಡಿತ್ತು. ಇಂದು ಸಂತ್ರಸ್ತೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಾನೂನು ವಿದ್ಯಾರ್ಥಿನಿ ಹಾಗೂ ಆಕೆಯ ಮೂವರು ಸ್ನೇಹಿತರನ್ನು ಎಸ್ಐಟಿ ಅಧಿಕಾರಿಗಳು ಸುಲಿಗೆ ಆರೋಪದಡಿಯಲ್ಲಿ ಬಂಧಿಸಿದ್ದರು.

ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಚಿನ್ಮಯಾನಂದ್ ನಿಂದ ಪ್ರಕರಣ ಹಿಂಪಡೆಯಲು ವಿದ್ಯಾರ್ಥಿ ಹಣ ಕೇಳಿದ್ದಳು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. 

ಚಿನ್ಮಯಾನಂದ ವಿರುದ್ಧ ಈ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಬಳಿಕ ಚಿನ್ಮಯಾನಂದ ಅವರು ಸಹ ಕಾನೂನು ವಿದ್ಯಾರ್ಥಿನಿ ಹಣಕ್ಕಾಗಿ ತನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇಸ್ ದಾಖಲಿಸಿದ್ದರು.

SCROLL FOR NEXT