ಶಶಿ ತರೂರ್ 
ದೇಶ

ಅಮಿತ್ ಶಾ ಇತಿಹಾಸ ತರಗತಿಯಲ್ಲಿ ಗಮನವಿಟ್ಟು ಕೇಳುತ್ತಿರಲಿಲ್ಲ ಎನಿಸುತ್ತದೆ: ಶಶಿ ತರೂರ್ ತಿರುಗೇಟು

ಭಾರತದಲ್ಲಿ ಧಾರ್ಮಿಕ ವಿಭಜನೆಗೆ ಕಾಂಗ್ರೆಸ್ ಪಕ್ಷ ಕಾರಣ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ಅಮಿತ್ ಶಾ ಅವರು ವಿದ್ಯಾರ್ಥಿಯಾಗಿದ್ದಾಗ ಇತಿಹಾಸ ತರಗತಿಯಲ್ಲಿ ಗಮನ ನೀಡುತ್ತಿರಲಿಲ್ಲ ಅನಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ನವದೆಹಲಿ: ಭಾರತದಲ್ಲಿ ಧಾರ್ಮಿಕ ವಿಭಜನೆಗೆ ಕಾಂಗ್ರೆಸ್ ಪಕ್ಷ ಕಾರಣ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ಅಮಿತ್ ಶಾ ಅವರು ವಿದ್ಯಾರ್ಥಿಯಾಗಿದ್ದಾಗ ಇತಿಹಾಸ ತರಗತಿಯಲ್ಲಿ ಗಮನ ನೀಡುತ್ತಿರಲಿಲ್ಲ ಅನಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.


ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಮಂಡನೆ ಮಾಡಿದಾಗ ತೀವ್ರ ವಿರೋಧ ವ್ಯಕ್ತವಾದಾಗ ಮಾತನಾಡಿದ್ದ ಗೃಹ ಸಚಿವ ಅಮಿತ್ ಶಾ, ಈ ದೇಶವನ್ನು ಧಾರ್ಮಿಕತೆಯ ಆಧಾರದಲ್ಲಿ ವಿಭಜನೆ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಆರೋಪಿಸಿದ್ದರು.


ಲೋಕಮಾತ್ ನ್ಯಾಷನಲ್ ಸಭೆಯಲ್ಲಿ 'ಭಾರತದ ರಾಜಕೀಯದಲ್ಲಿ ಸ್ಥಳೀಯ ಪಕ್ಷಗಳ ಪಾತ್ರ'ದ ಕುರಿತು ಮಾತನಾಡಿದ ತರೂರ್, ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್ ಎರಡು ದೇಶದ ಸಿದ್ಧಾಂತವನ್ನು ಅಪಾರವಾಗಿ ಸಮರ್ಥಿಸಿಕೊಂಡಿದ್ದವು. ಬಹುಪಾಲು ಜನರು ಹಿಂದಿ ಭಾಷೆ ಮಾತನಾಡಬೇಕು, ಹಿಂದುತ್ವ ಪ್ರಚಾರ ಮಾಡಬೇಕು, ಹಿಂದೂಸ್ತಾನವಾಗಬೇಕು ಎಂಬ ಬಿಜೆಪಿಯ ಹೇರಿಕೆಗೆ ಸ್ಥಳೀಯ ಪಕ್ಷಗಳು ಆಳುತ್ತಿರುವ ರಾಜ್ಯಗಳಿಂದ ವಿರೋಧ ಕೇಳಿಬರುತ್ತಿದೆ ಎಂದು ಅಭಿಪ್ರಾಯಪಟ್ಟರು.


ಹಿಂದಿ ಭಾಷೆ ಹೇರಿಕೆಯನ್ನು ದಕ್ಷಿಣ ಭಾರತದ ಜನರು ಒಪ್ಪುವುದಿಲ್ಲ ಎಂದು ಬಿಜೆಪಿಗೆ ಮನದಟ್ಟಾಗಿದೆ. ಇನ್ನು ಹಿಂದುತ್ವ ಅಜೆಂಡಾವನ್ನು ಸಹ ದಕ್ಷಿಣ ಭಾರತದ ಅನೇಕ ಶಾಲೆಗಳಲ್ಲಿ ಒಪ್ಪುವುದಿಲ್ಲ ಎಂದರು.ಇನ್ನು ದೇಶಾದ್ಯಂತ ಬಿಜೆಪಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ನಾಗರಿಕ ದಾಖಲಾತಿ ಸ್ಥಳೀಯ ಪಕ್ಷಗಳಿಂದ ಆಳಲ್ಪಡುತ್ತಿರುವ ರಾಜ್ಯಗಳಲ್ಲಿ ಹಲವು ಸಮಸ್ಯೆಗಳನ್ನು ಸೃಷ್ಟಿಸಲಿದೆ ಎಂದರು.


ಶಶಿ ತರೂರ್ ಹೇಳಿದ್ದೇನು?: ಅಮಿತಾ ಶಾ ಅವರು ಇತಿಹಾಸದ ತರಗತಿಯಲ್ಲಿ ಪಾಠಕ್ಕೆ ಸಾಕಷ್ಟು ಗಮನ ನೀಡುತ್ತಿರಲಿಲ್ಲ ಎನಿಸುತ್ತದೆ. ಇಡೀ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವೊಂದೇ ಅಖಂಡ ಭಾರತದ ಪ್ರತಿನಿಧಿಯಾಗಿ ನಿಂತುಕೊಂಡಿದ್ದು. ಆಗಿನ ಸಂದರ್ಭದಲ್ಲಿ ಕಾಂಗ್ರೆಸ್ ಗೆ ವಿರುದ್ಧವಾಗಿದ್ದು ಹಿಂದೂ ಮಹಾಸಭಾ ಮಾತ್ರ, ಹಿಂದೂ ಮಹಾಸಭಾ 1935ರಲ್ಲಿ ಹಿಂದೂ ಮತ್ತು ಮುಸ್ಲಿಂರಿಗೆ ಎರಡು ಪ್ರತ್ಯೇಕ ದೇಶ ಬೇಕೆಂದು ನಿರ್ಧರಿಸಿತು, ಇನ್ನು ಮೊಹಮ್ಮದ್ ಆಲಿ ಜಿನ್ನಾ ನೇತೃತ್ವದ ಮುಸ್ಲಿಂ ಲೀಗ್ ಸಹ ಇದೇ ಸಿದ್ಧಾಂತವನ್ನು ಮುಂದಿಟ್ಟಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದವರು 1945ರವರೆಗೆ ಮೌಲಾನಾ ಆಜಾದ್ ಎಂಬ ಮುಸ್ಲಿಂರು ಎಂದು ತರೂರ್ ಇತಿಹಾಸವನ್ನು ವಿವರಿಸಿದರು.


ಬಿಜೆಪಿಯವರು ಪ್ರತಿಯೊಂದಕ್ಕೂ ಕಾಂಗ್ರೆಸ್ ನ ಮೇಲೆ ಆರೋಪ ಮಾಡುತ್ತಾರೆ. ಅದು ಅವರಿಗೆ ಚಾಳಿಯಾಗಿಬಿಟ್ಟಿದೆ. ದೆಹಲಿಯಲ್ಲಿ ನಾಳೆ ಹವಾಮಾನ ಕೆಟ್ಟರೂ ಅದಕ್ಕೆ ಕಾಂಗ್ರೆಸ್ ಮತ್ತು ನೆಹರೂ ಕಾರಣ ಎನ್ನುತ್ತಾರೆ ಎಂದು ತರೂರ್ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!

SCROLL FOR NEXT