ಸಂಗ್ರಹ ಚಿತ್ರ 
ದೇಶ

ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ: ಪೌರತ್ವ ತಿದ್ದುಪಡಿ ಮಸೂದೆ ಕುರಿತು 'ಈಶಾನ್ಯ' ಜನತೆಗೆ ಪ್ರಧಾನಿ ಮೋದಿ ಭರವಸೆ

ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು, ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು, ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಿಮ್ಮ ಹಕ್ಕನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಪೌರತ್ವ ಮಸೂದೆ ಕುರಿತಂತೆ ಅನಗತ್ಯ ಭಯಬೇಡ. ನಿಮ್ಮ ಹಕ್ಕುಗಳನ್ನು, ಅನನ್ಯ ಗುರುತು ಮತ್ತು ಸುಂದರ ಸಂಸ್ಕೃತಿಯನ್ನುಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಪ್ರವರ್ಧಮಾನಕ್ಕೆ ಬಂದು ಬೆಳೆಯುತ್ತದೆ. ಅಸ್ಸಾಂ ಮತ್ತು ಈಶಾನ್ಯ ಭಾರತದ ನನ್ನ ಸಹೋದರ-ಸಹೋದರಿಯರಿಗೆ ನಾನು ಈ ಮೂಲಕ ಹೇಳುವುದೇನೆಂದರೆ, ಕೇಂದ್ರ ಸರ್ಕಾರ ಮತ್ತು ನಾನು ಅಸ್ಸಾಮ್ ಜನರ ರಾಜಕೀಯ, ಭಾಷಾ, ಸಾಂಸ್ಕೃತಿಕ ಮತ್ತು ಭೂ ಹಕ್ಕುಗಳನ್ನು ಸಾಂವಿಧಾನಿಕವಾಗಿ ರಕ್ಷಿಸಲು ಸಂಪೂರ್ಣವಾಗಿ ಬದ್ಧವಾಗಿದ್ದೇವೆ. ಈ ಕುರಿತಂತೆ ಅನಗತ್ಯ ಭಯ ಬೇಡ ಎಂದು ಹೇಳಿದ್ದಾರೆ.

ಇನ್ನು ನಿನ್ನೆಯಷ್ಟೇ ರಾಜ್ಯಸಭೆಯಲ್ಲೂ ಪೌರತ್ವ ತಿದ್ದುಪಡಿ ಮಸೂದೆ ಮಂಡನೆಯಾಗಿ ಅನುಮೋದನೆ ಕೂಡ ಪಡೆದಿತ್ತು. ಮಸೂದೆಯ ಪರವಾಗಿ 125 ಮತಗಳು ಬಂದರೆ, ವಿರುದ್ಧವಾಗಿ 99 ಮತಗಳು ಚಲಾವಣೆಯಾದವು. ಅನುಮೋದನೆಗೆ 112 ಮತಗಳ ಅವಶ್ಯಕತೆ ಇತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ ನಟಿ ಮೇಲೆ ಅತ್ಯಾಚಾರ, ಹಲ್ಲೆ ಪ್ರಕರಣ: ಪಲ್ಸರ್ ಸುನಿ ಸೇರಿ ಎಲ್ಲಾ ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!

ಗೃಹ ಲಕ್ಷ್ಮಿ ಹಣ: ಸಚಿವೆ ಲಕ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ರಾ? 'ಡಿನ್ನರ್ ಪಾಲಿಟಿಕ್ಸ್' ಬಗ್ಗೆ ಬಿಜೆಪಿ ಕಿಡಿ!

'ಏನೋ ತಪ್ಪಾಗಿದೆ...' ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನೆ!

ದರ್ಶನ್ ಜೈಲ್‌ನಲ್ಲಿ ಇದ್ರೂ ರಾಜ್ಯಾದ್ಯಂತ 'ಡೆವಿಲ್' ಫೀವರ್, ಮೊದಲ ದಿನದ ಗಳಿಕೆ ಎಷ್ಟು?

ಮಾಲೀಕರೇ ವಿದೇಶಿಗರಿಗೆ ಮನೆ ಬಾಡಿಗೆ ಕೊಡುವ ಮುನ್ನ ಎಚ್ಚರ; ಡ್ರಗ್ಸ್ ಮಾರಾಟಗಾರರಿರುವ ಕಟ್ಟಡ ಕೆಡವಲು ಸರ್ಕಾರ ಚಿಂತನೆ!

SCROLL FOR NEXT