ಸುಪ್ರೀಂಕೋರ್ಟ್ 
ದೇಶ

ಹೈದರಾಬಾದ್ ಎನ್ ಕೌಂಟರ್: ತನಿಖೆಗೆ ವಿಚಾರಣಾ ಆಯೋಗ ನೇಮಿಸಿದ 'ಸುಪ್ರೀಂ'

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಪೊಲೀಸ್ ಎನ್ ಕೌಂಟರ್ ತನಿಖೆಗಾಗಿ ಸುಪ್ರೀಂ  ಕೋರ್ಟ್ ಮೂವರು ಸದಸ್ಯರ ವಿಚಾರಣಾ ಆಯೋಗ ನೇಮಕ ಮಾಡಿದೆ.

ನವದೆಹಲಿ:  ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಪೊಲೀಸ್ ಎನ್ ಕೌಂಟರ್ ತನಿಖೆಗಾಗಿ ಸುಪ್ರೀಂ  ಕೋರ್ಟ್ ಮೂವರು ಸದಸ್ಯರ ವಿಚಾರಣಾ ಆಯೋಗ ನೇಮಕ ಮಾಡಿದೆ.  

ಮುಖ್ಯ  ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ  ನ್ಯಾಯಪೀಠ, ಈ ತನಿಖಾ ಆಯೋಗ ನೇಮಕ ಮಾಡಿದೆ

ಇದರಲ್ಲಿ ನಿವೃತ್ತ  ನ್ಯಾಯಾಧೀಶ ವಿ.ಎಸ್. ಸಿರ್ಪುರ್ಕರ್, ನಿವೃತ್ತ ಬಾಂಬೆ ಹೈಕೋರ್ಟ್ ನ್ಯಾಯಾಧೀಶ ರೇಖಾ ಬಲ್ಡೋಟಾ ಮತ್ತು ಸಿಬಿಐನ  ಮಾಜಿ ನಿರ್ದೇಶಕ ಕಾರ್ತಿಕೇಯನ್ ಆಯೋಗದ ಸದಸ್ಯರಾಗಿದ್ದಾರೆ. 

ತೆಲಂಗಾಣ ಸರ್ಕಾರ ಪ್ರತಿನಿಧಿಸಿದ್ದ   ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರಿಗೆ  ಘಟನೆಯ ಕುರಿತ  ಅಂಶಗಳ ವಿಚಾರಣೆಯ ಅಗತ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ. 

ಆಯೋಗವು ಆರು ತಿಂಗಳಲ್ಲಿ ತನ್ನ ವಿಚಾರಣೆ  ಪೂರ್ಣಗೊಳಿಸಬೇಕು  ಎಂದೂ ಉನ್ನತ ನ್ಯಾಯಾಲಯ ಹೇಳಿದೆ. ವಕೀಲ ಜಿ ಎಸ್ ಮಣಿ ಮತ್ತು ಇತರರು ಸಲ್ಲಿಸಿದ್ದ ಮನವಿಯ  ವಿಚಾರಣೆ  ನಂತರ ಕೋರ್ಟ್  ಆದೇಶ  ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT