ನಿರ್ಭಯಾ ತಾಯಿ 
ದೇಶ

ನಿರ್ಭಯಾ ಕೇಸ್: ಡಿ.18ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ದೆಹಲಿ ಕೋರ್ಟ್ 

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಯಾ ಪೋಷಕರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಡಿಸೆಂಬರ್ 18ಕ್ಕೆ ಮುಂದೂಡಿದೆ.

ನವದೆಹಲಿ:ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಯಾ ಪೋಷಕರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಡಿಸೆಂಬರ್ 18ಕ್ಕೆ ಮುಂದೂಡಿದೆ.


ತಮಗೆ ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮರುಪರಿಶೀಲಿಸುವಂತೆ ಕೋರಿ ನಾಲ್ವರು ಆರೋಪಿಗಳಲ್ಲಿ ಒಬ್ಬಾತ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 17ರಂದು ನಡೆಸಲಿದೆ.


ಇದಕ್ಕೆ ಪ್ರತಿಯಾಗಿ ಅತ್ಯಾಚಾರಿ ಆರೋಪಿಗಳಿಗೆ ಆದಷ್ಟು ಬೇಗ ಗಲ್ಲುಶಿಕ್ಷೆ ಜಾರಿಗೊಳಿಸುವಂತೆ ಕೋರಿ ದೆಹಲಿ ಕೋರ್ಟ್ ಗೆ ನಿರ್ಭಯಾ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಡಿ.18 ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.


ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ಅರೊರಾ, ಸುಪ್ರೀಂ ಕೋರ್ಟ್ ನಲ್ಲಿ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆದ ಬಳಿಕ ನಾವು ವಿಚಾರಣೆ ನಡೆಸುತ್ತೇವೆ ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ಮುಂದೂಡಿದರು.
ಇಂದಿನ ನ್ಯಾಯಾಲಯದ ವಿಚಾರಣೆ ವೇಳೆ ಅತ್ಯಾಚಾರ ಆರೋಪಿಗಳು ಬೇಕೆಂದೇ ವಿಳಂಬ ತಂತ್ರವನ್ನು ಮಾಡುತ್ತಿದ್ದಾರೆ ಎಂದು ನಿರ್ಭಯಾ ಪೋಷಕರು ಆರೋಪಿಸಿದರು. 


ನಿರ್ಭಯಾ ಅತ್ಯಾಚಾರ ಪ್ರಕರಣದ ದೋಷಿಗಳಿಗೆ ಗಲ್ಲುಶಿಕ್ಷೆ ಘೋಷಣೆಯಾಗುವ ಸಾಧ್ಯತೆಯಿರುವುದರಿಂದ ಪ್ರಕರಣದ ಮರುಪರಿಶೀಲನೆಗಾಗಿ ಒಬ್ಬ ಅಪರಾಧಿ ಸುಪ್ರೀಂಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದು ಅದು ಇದೇ 17ರಂದು ನಡೆಯಲಿದೆ. ಹೀಗಾಗಿ  ನಿರ್ಭಯಾ ಪೋಷಕರ ಅರ್ಜಿ ವಿಚಾರಣೆಯನ್ನು ದೆಹಲಿ ಕೋರ್ಟ್ ಡಿಸೆಂಬರ್ 18 ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT