ಸಾಂದರ್ಭಿಕ ಚಿತ್ರ 
ದೇಶ

ಶಬರಿಮಲೆ ಪ್ರವೇಶ: ಮಹಿಳೆಯರಿಗೆ ಭದ್ರತೆ ಕೊಡಿ ಎಂದು ಸರ್ಕಾರಕ್ಕೆ ಆದೇಶ ನೀಡಲು ಸುಪ್ರೀಂ ಕೋರ್ಟ್ ನಕಾರ 

ಶಬರಿಮಲೆ ಪ್ರವೇಶಕ್ಕೆ ಪೊಲೀಸ್ ಭದ್ರತೆಯಲ್ಲಿ ರಕ್ಷಣೆ ನೀಡಲು ಕೇರಳ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. 

ನವದೆಹಲಿ: ಶಬರಿಮಲೆ ಪ್ರವೇಶಕ್ಕೆ ಪೊಲೀಸ್ ಭದ್ರತೆಯಲ್ಲಿ ರಕ್ಷಣೆ ನೀಡಲು ಕೇರಳ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.


ಈ ವಿಚಾರ ತುಂಬಾ ಭಾವನಾತ್ಮಕವಾಗಿದ್ದು ಪರಿಸ್ಥಿತಿ ವಿಕೋಪಕ್ಕೆ ಹೋಗುವುದು ಬೇಡ ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರು ಪ್ರವೇಶದ ವಿವಾದ ಈಗಾಗಲೇ ಏಳು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸಿರುವುದರಿಂದ ಈಗ ಯಾವುದೇ ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. 


ಈ ವಿವಾದವನ್ನು ಆಲಿಸಲು ಶೀಘ್ರದಲ್ಲಿಯೇ ವಿಸ್ತೃತ ನ್ಯಾಯಪೀಠವನ್ನು ರಚಿಸಲು ಪ್ರಯತ್ನಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಬಿ ಆರ್ ಗವೈ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡಿರುವ ನ್ಯಾಯಪೀಠ, 2018ರ ಸೆಪ್ಟೆಂಬರ್ 28ರ ಆದೇಶಕ್ಕೆ ತಡೆ ನೀಡದಿದ್ದರೂ ಕೂಡ ಎಲ್ಲಾ ವಯೋಮಾನದ ಮಹಿಳೆಯರು ಶಬರಿಮಲೆ ಪ್ರವೇಶಿಸಬಹುದು ಎಂದಿದ್ದ ಆದೇಶ ಅಂತಿಮವಲ್ಲ ಎಂಬುದು ಕೂಡ ಅಷ್ಟೇ ಸತ್ಯ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT