ಯೋಗಿ ಆದಿತ್ಯನಾಥ್, ಅನುದುಬೆ 
ದೇಶ

ಉತ್ತರ ಪ್ರದೇಶ: ಮುಖ್ಯಮಂತ್ರಿ ಆದಿತ್ಯನಾಥ್ ನಿವಾಸದ ಹೊರಗೆ ಧರಣಿ, ಸಾಮಾಜಿಕ ಹೋರಾಟಗಾರ್ತಿಯ ಬಂಧನ

ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೋರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ  ಸಾಮಾಜಿಕ ಹೋರಾಟಗಾರ್ತಿ ಅನು ದುಬೆ ಅವರನ್ನು ಪೊಲೀಸರು ಬಂಧಿಸಿದ್ದಾರೆ

ಲಖನೌ: ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೋರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ  ಸಾಮಾಜಿಕ ಹೋರಾಟಗಾರ್ತಿ ಅನು ದುಬೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನನ್ನ ಸ್ವಂತ ದೇಶದಲ್ಲಿ ಏಕೆ ನನಗೆ ಸುರಕ್ಷತೆ ಇಲ್ಲ ಎಂಬ ಫಲಕವನ್ನು ಹಿಡಿದು ಅನು ದುಬೆ ಆದಿತ್ಯನಾಥ್ ನಿವಾಸದ ಬಳಿ ಧರಣಿ ನಡೆಸುತ್ತಿದ್ದರು. ನಂತರ ಅವರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಹೈದ್ರಾಬಾದಿನ ಪಶು ವೈದ್ಯ ಮೇಲಿನ ಅತ್ಯಾಚಾರ ವಿರುದ್ಧ ನವೆಂಬರ್ 30 ರಂದು ದೆಹಲಿಯಲ್ಲಿ ಏಕಾಂಗಿಯಾಗಿ ದುಬೆ ಪ್ರತಿಭಟನೆ ನಡೆಸಿದ್ದರು. ನಂತರ ಮಹಿಳಾ ಪೊಲೀಸರಿಂದ ಹಲ್ಲೆಗೊಳಗಾಗಿದ್ದರು. 

ಆರೋಪಿಗಳು ಬೆಂಕಿ ಹಚ್ಚಿದ್ದರಿಂದ  ಉನ್ನಾವೋ ಅತ್ಯಾಚಾರ ಸಂತ್ರಸ್ತೆ ದಾಖಲಾಗಿದ್ದ ದೆಹಲಿಯ ಸಪ್ದರ್ ಜಂಗ್ ಆಸ್ಪತ್ರೆ ಮುಂಭಾಗ ಡಿಸೆಂಬರ್ 5 ರಂದು ಅನು ದುಬೆ ಪ್ರತಿಭಟನೆ ನಡೆಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT