ಸಂಗ್ರಹ ಚಿತ್ರ 
ದೇಶ

ಪೌರತ್ವ ತಿದ್ದುಪಡಿ ಮಸೂದೆ: ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಕೆ

ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದ್ದು, ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಿಬ್ರೂಗಢ್: ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದ್ದು, ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತೀವ್ರ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಅಸ್ಸಾಂನ ಗುವಾಹತಿಯಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೂ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೌರತ್ವ ಮಸೂದೆ ಕುರಿತು ಪೂರ್ವೋತ್ತರ ರಾಜ್ಯಗಳಲ್ಲಿ ಹಿಂಸಾಚಾರ
ಏತನ್ಮಧ್ಯೆ ಅತ್ತ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪೂರ್ವೋತ್ತರದ ರಾಜ್ಯಗಳಲ್ಲಿ ಹಿಂಸಾಚಾರ ಮುಂದುವರೆದಿದೆ. ಅಸ್ಸಾಂನಲ್ಲಿ AASU ನೇತೃತ್ವದಲ್ಲಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ಮುಂದುವರೆದಿದೆ. ರಾಜ್ಯದ ಒಟ್ಟು ಹತ್ತು ಜಿಲ್ಲೆಗಳಲ್ಲಿ ಹಿಂಸಾಚಾರದ ಘಟನೆಗಳು ನಡೆದಿದ್ದು, ಕರ್ಫ್ಯೂ ಜಾರಿಗೊಳಿಸಲಾಗಿದೆ. ಗುವಾಹಾಟಿ ಮತ್ತು ದಿಬ್ರುಗಡ್ ಜಿಲ್ಲೆಗಳಲ್ಲಿ ಕರ್ಫ್ಯೂನಲ್ಲಿ ಸಡಿಲಿಕೆ ನೀಡಲಾಗಿದೆ. ಆ ಬಳಿಕ ಸಾರ್ವಜನಿಕರು ಅಗತ್ಯವಿರುವ ವಸ್ತುಗಳ ಖರೀದಿಗೆ ಮುಂದಾಗಿದ್ದಾರೆ. ಅಸ್ಸಾಂನಲ್ಲಿ ನಡೆದ ಹಿಂಸಾಚಾರದಲ್ಲಿ ಇದುವರೆಗೆ ನಾಲ್ವರು ಮೃತಪಟ್ಟಿದ್ದಾರೆ. ಡಿಸೆಂಬರ್ 22ರವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಸ್ಸಾಂನ ಒಟ್ಟು 10 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಯನ್ನೂ ಕೂಡ ಸ್ಥಗಿತಗೊಳಿಸಲಾಗಿದೆ. ಮೇಘಾಲಯದಲ್ಲಿಯೂ ಕೂಡ ಇಂಟರ್ನೆಟ್ ಬಳಕೆಯ ಮೇಲೆ ನಿಷೇಧ ಹೇರಲಾಗಿದೆ. ಶಿಲಾಂಗ್ ನ ಕೆಲ ಪ್ರಾಂತ್ಯಗಳಲ್ಲಿಯೂ ಕೂಡ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಪ್ರತಿಭಟನೆ ಕೈ ಬಿಡದಿದ್ದರೆ ಕಠಿಣ ಕ್ರಮ: ಸಿಎಂ ಸರ್ವಾನಂದ್ ಸೋನೋವಾಲ್
ಪೌರತ್ವ ತಿದ್ದುಪಡಿ ಕಾನೂನನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸರ್ವಾನಂದ್ ಸೋನೋವಾಲ್, ಹಿಂಸಾಚಾರಕ್ಕೆ ಮುಂದಾಗಿರುವ ಪ್ರತಿಭಟನಾಕಾರರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅಸ್ಸಾಂ ಗವರ್ನರ್ ಜನತೆಯಲ್ಲಿ ಮನವಿ ಮಾಡಿದ್ದಾರೆ. ಈ ಮಸೂದೆ 'ಅಸ್ಸಾಂ ಒಪ್ಪಂದ'ಕ್ಕೆ ಮಾರಕವಾಗಿದೆ ಎಂದು ಪ್ರತಿಭಟನಾಕಾರರು ತಮ್ಮ ವಾದ ಮಂಡಿಸಿದ್ದಾರೆ. ಈ ಮಸೂದೆ 'ಅಸ್ಸಾಂ ಒಪ್ಪಂದ'ದ 6ನೇ ಅನುಚ್ಛೇದದ ಉಲ್ಲಂಘನೆಯಾಗಿದ್ದು, 6ನೇ ಅನುಚ್ಚೆದದಲ್ಲಿ ರಾಜ್ಯದ ಸಂಸ್ಕೃತಿ, ಭಾಷೆಯ ಅಸ್ತಿತ್ವದ ರಕ್ಷಣೆ ಮಾಡುವ ಭರವಸೆ ನೀಡಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT