ಅಧೀರ್ ರಂಜನ್ ಚೌದರಿ 
ದೇಶ

ಪೌರತ್ವ ಕಾಯ್ದೆ ವಿರೋಧಿಸಿ ಹಿಂಸಾಚಾರ: ಅಸ್ಸಾಂ ಹೊಸ ಕಾಶ್ಮೀರ- ಅಧೀರ್ ರಂಜನ್ ಚೌಧರಿ

ಪೌರತ್ವ ( ತಿದ್ದುಪಡಿ) ಕಾಯ್ದೆ ವಿರೋಧಿಸಿ ಈಶಾನ್ಯ ಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ, ಅಧೀರ್ ರಂಜನ್ ಚೌಧರಿ ಅಸ್ಸಾಂ ಹೊಸ ಕಾಶ್ಮೀರವಾಗುತ್ತಿದೆ ಎಂದಿದ್ದಾರೆ.

ನವದೆಹಲಿ: ಪೌರತ್ವ ( ತಿದ್ದುಪಡಿ) ಕಾಯ್ದೆ ವಿರೋಧಿಸಿ ಈಶಾನ್ಯ ಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ, ಅಧೀರ್ ರಂಜನ್ ಚೌಧರಿ ಅಸ್ಸಾಂ ಹೊಸ ಕಾಶ್ಮೀರವಾಗುತ್ತಿದೆ ಎಂದಿದ್ದಾರೆ.

"ಇಡೀ ಈಶಾನ್ಯ ಪ್ರದೇಶ, ವಿಶೇಷವಾಗಿ ಅಸ್ಸಾಂ ಹಿಂಸಾಚಾರದಲ್ಲಿ ಮುಳುಗಿದೆ. ಇದು  ರಾಷ್ಟ್ರದ ಸುರಕ್ಷತೆ ಮತ್ತು ಸಂರಕ್ಷಣೆಗೆ ಹಾನಿಕಾರಕವಾಗಿದೆ ಎಂದು ಆತಂಕಕಾರಿ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂ ದೇಶಕ್ಕೆ ಆಯಕಟ್ಟಿನ ಪ್ರಮುಖ ಸ್ಥಳವೆಂದು ಗುರುತಿಸಲ್ಪಟ್ಟಿದೆ. ಒಂದು ಕಡೆ ಇದು ಕಾಶ್ಮೀರವಾಗಿದ್ದರೆ ಮತ್ತೊಂದೆಡೆ ಹೊಸ ಕಾಶ್ಮೀರವಾಗಿದ್ದು, ಎರಡರ ಬಗ್ಗೆಯೂ ತುಂಬಾ ಕಾಳಜಿ ವಹಿಸಬೇಕಾಗಿದೆ ಎಂದು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪಶ್ಚಿಮ ಬಂಗಾಳ ರಾಜ್ಯದ ಜಿಲ್ಲೆಗಳಲ್ಲಿಯೂ ಹಿಂಸಾಚಾರಕ್ಕೆ ಕಾರಣವಾಗಿದೆ. ಅಲ್ಲಿನ ಅಲ್ಪಸಂಖ್ಯಾತರ ಮೇಲೆ ತಾರತಮ್ಯ ಮಾಡಲಾಗುತ್ತಿದೆ. ಹಿಂಸಾಚಾರ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಲ್ಲಿನ ರಾಜ್ಯಸರ್ಕಾರವನ್ನು ಈಗಾಗಲೇ ಮನವಿ ಮಾಡಿಕೊಂಡಿರುವುದಾಗಿ ಚೌಧರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT