ಸಂಗ್ರಹ ಚಿತ್ರ 
ದೇಶ

ನಿಜವಾದ ಭಾರತೀಯ ನಾಗರಿಕರನ್ನು ರಕ್ಷಿಸುವ ಹೊಣೆ ನಮ್ಮದು: ಸಿಎಂ ಸರ್ಬಾನಂದ ಸೋನೋವಾಲ್

ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಈಶಾನ್ಯ ಭಾರತದಲ್ಲಿ ಪ್ರತಿಭಟನೆ ಮತ್ತು ಹಿಂಸಾಚಾರ ಉಲ್ಬಣಿಸಿರುವಂತೆಯೇ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

ಗುವಾಹತಿ: ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಈಶಾನ್ಯ ಭಾರತದಲ್ಲಿ ಪ್ರತಿಭಟನೆ ಮತ್ತು ಹಿಂಸಾಚಾರ ಉಲ್ಬಣಿಸಿರುವಂತೆಯೇ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರ ಮುಂದುವರೆದಿರುವಂತೆಯೇ ಇತ್ತ ಸಿಎಂ ಸರ್ಬಾನಂದ ಸೋನೋವಾಲ್ ಅವರು, 'ನಿಜವಾದ ಭಾರತೀಯ ನಾಗರಿಕರನ್ನು ರಕ್ಷಿಸುವ ಹೊಣೆ ನಮ್ಮದು ಎಂದು ಹೇಳಿದ್ದಾರೆ. ಅಲ್ಲದೆ ನೈಜ ಅಸ್ಸಾಂ ನಾಗರಿಕರ ಹಕ್ಕುಗಳಿಗೆ ಮಸೂದೆಯಿಂದ ಯಾವುದೇ ಧಕ್ಕೆ ಇಲ್ಲ. ಆದರೆ ಮಸೂದೆ ಕುರಿತು ಕೆಲವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆ ಮೂಲಕ ಹಿಂಸಾಚಾರಕ್ಕೆ ಪ್ರಚೋದಿಸುತ್ತಿದ್ದಾರೆ. ಇಂತಹವರಿಂದ ಶಾಂತಿಭಂಗವಾಗುತ್ತಿದ್ದು, ಅಂತಹವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಅಸ್ಸಾಂನಲ್ಲಿ ಮುಂದುವರೆದ ಪ್ರತಿಭಟನೆ
ಇನ್ನು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಶನಿವಾರವೂ ಪ್ರತಿಭಟನೆ ಮುಂದುವರಿದಿದೆ. ಹಲವೆಡೆ ಹಿಂಸಾಚಾರ ನಡೆದಿದ್ದು, ಅಸ್ಸಾಂನಲ್ಲಿ ಇಂಧನ ಟ್ಯಾಂಕರ್‌ಗೆ ಬೆಂಕಿ ಹಚ್ಚಲಾಗಿದ್ದು, ಈ ವೇಳೆ ಚಾಲಕ ಮೃತಪಟ್ಟಿದ್ದಾನೆ. ಇಂಟರ್ನೆಟ್‌ ಸೇವೆ ಸ್ಥಗಿತವನ್ನು ಸೋಮವಾರದವರೆಗೆ ವಿಸ್ತರಿಸಲಾಗಿದೆ. ಇನ್ನು ಮೇಘಾಲಯದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಕಾರರು ಯತ್ನಿಸಿದ್ದಾರೆ. ಐದು ರೈಲುಗಳು, 15 ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದ್ದು, ರಾಜ್ಯದ ಹಲವೆಡೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಡಿಸೆಂಬರ್ 19ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು 60 ಸಂಘಟನೆಗಳು ಕರೆ ನೀಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT