ದೇಶ

ಪೌರತ್ವ ಮಸೂದೆ ವಿರುದ್ಧ ಪ್ರತಿಭಟನೆ: ಕೇಂದ್ರ ಸರ್ಕಾರ ನಿಜವಾದ ತಪ್ಪಿತಸ್ಥ- ಗುಲಾಂ ನಬಿ ಆಜಾದ್

Manjula VN

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ವಿರುದ್ದ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಇವೆಲ್ಲಕ್ಕೂ ಕೇಂದ್ರ ಸರ್ಕಾರವೇ ನಿಜವಾದ ತಪ್ಪಿತಸ್ಥನಾಗಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ. 

ಮುಂದಿನ ಪರಿಸ್ಥಿತಿ ಏನಾಗುತ್ತೆ ಎಂಬುದನ್ನು ಚಿಂತಿಸದೆಯೇ ಜನಪ್ರಿಯವಲ್ಲದ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ಪಡೆದುಕೊಂಡಿದ್ದಕ್ಕೆ ಕೇಂದ್ರ ಸರ್ಕಾರವೇ ನಿಜವಾದ ತಪ್ಪಿತಸ್ಥನಾಗಿದೆ ಎಂದು ಹೇಳಿದ್ದಾರೆ. 

ಜನರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪಶ್ಚಿಮಬಂಗಾಳ, ಮಹಾರಾಷ್ಟ್ರ, ದೆಹಸಲಿ ಹಾಗೂ ಉತ್ತರಪ್ರದೇಶ ಸೇರಿದಂತೆ ದೇಶದ ನಾನಾ ಕಡೆಗಳಿಂದ ಮಸೂದೆಗೆ ವಿರೋಧ ವ್ಯಕ್ತವಾಗುತ್ತಿದೆ. ಜನರು ಮಸೂದೆಯನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. 

SCROLL FOR NEXT