ಉದ್ಧವ್ ಠಾಕ್ರೆ 
ದೇಶ

ಪ್ರಧಾನಿ ಟೀ ಮಾರುತ್ತಿದ್ದರು, ಹೀಗಾಗಿ ಬಿಜೆಪಿಗೆ ಟೀ ಅಂದರೆ ಆಗಲ್ಲ: ಉದ್ಧವ್‌ ಠಾಕ್ರೆ ವ್ಯಂಗ್ಯ

ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟೀ ಮಾರಾಟ ಮಾಡುತ್ತಿದ್ದರಲ್ಲ, ಹೀಗಾಗಿ ಅವರಿಗೆ ಟೀ ಎಂದರೆ ಆಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ  ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

ನಾಗಪುರ:  ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟೀ ಮಾರಾಟ ಮಾಡುತ್ತಿದ್ದರಲ್ಲ, ಹೀಗಾಗಿ ಅವರಿಗೆ ಟೀ ಎಂದರೆ ಆಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ  ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ಕಾರ ಆಯೋಜಿಸುವ ಸಾಂಪ್ರದಾಯಿಕ ಔತಣಕೂಟಕ್ಕೆ (ಟೀ ಪಾರ್ಟಿ) ಬಿಜೆಪಿ ನಾಯಕರು ಗೈರುಹಾಜರಾಗಿದ್ದು ಉದ್ಧವ್ ಅವರನ್ನು ಕೆರಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ‘ನಾನೂ ಟೀ ಮಾರುತ್ತಿದ್ದೆ’ ಹೇಳಿಕೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಜೆಪಿ ಮಹಾರಾಷ್ಟ್ರ ಘಟಕವನ್ನು ವ್ಯಂಗ್ಯ ಮಾಡಲು ಬಳಸಿಕೊಂಡಿದ್ದಾರೆ.

‘ಹಿಂದುತ್ವದ ಪ್ರತಿಪಾದಕ ವೀರ್ ಸಾವರ್ಕರ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವಮಾನಗೊಳಿಸಿದ್ದಾರೆ. ಅಂಥವರ ಜೊತೆಗೆ ಶಿವಸೇನಾ ಕೈಜೋಡಿಸಿದೆ’ ಎಂದು ದೂರಿದ್ದ ಬಿಜೆಪಿ ವಿವಿಧ ಕಾರಣಗಳನ್ನು ಮುಂದಿಟ್ಟು ಔತಣಕೂಟದಿಂದ ದೂರ ಉಳಿದಿತ್ತು.

‘ನಮ್ಮ ಪ್ರಧಾನಿಯ ಹಿನ್ನೆಲೆ ನಮಗೆ ಗೊತ್ತು. ಅವರು ಒಂದು ಕಾಲಕ್ಕೆ ಟೀ ಮಾರುತ್ತಿದ್ದರು. ಆದರೆ ನನಗೆ ನಮ್ಮ ರಾಜ್ಯದ ಬಿಜೆಪಿ ನಾಯಕರು ಟೀ ಕುಡಿಯಲು ಯಾಕೆ ಬರಲಿಲ್ಲವೋ ಅರ್ಥವಾಗಲಿಲ್ಲ. ಬಹುಶಃ ಪ್ರಧಾನಿಯೊಂದಿಗೆ ಮಹಾರಾಷ್ಟ್ರ ಬಿಜೆಪಿ ಘಟಕದ ನಾಯಕರಿಗೆ ಭಿನ್ನಾಭಿಪ್ರಾಯ ಇರಬಹುದು’ ಎಂದು ಠಾಕ್ರೆ ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ‘ದಿಕ್ಕು ತಪ್ಪಿಸುವ ಅಸ್ತ್ರ’; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

SCROLL FOR NEXT