ಉದ್ಧವ್ ಠಾಕ್ರೆ 
ದೇಶ

ಪ್ರಧಾನಿ ಟೀ ಮಾರುತ್ತಿದ್ದರು, ಹೀಗಾಗಿ ಬಿಜೆಪಿಗೆ ಟೀ ಅಂದರೆ ಆಗಲ್ಲ: ಉದ್ಧವ್‌ ಠಾಕ್ರೆ ವ್ಯಂಗ್ಯ

ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟೀ ಮಾರಾಟ ಮಾಡುತ್ತಿದ್ದರಲ್ಲ, ಹೀಗಾಗಿ ಅವರಿಗೆ ಟೀ ಎಂದರೆ ಆಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ  ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

ನಾಗಪುರ:  ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟೀ ಮಾರಾಟ ಮಾಡುತ್ತಿದ್ದರಲ್ಲ, ಹೀಗಾಗಿ ಅವರಿಗೆ ಟೀ ಎಂದರೆ ಆಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ  ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ಕಾರ ಆಯೋಜಿಸುವ ಸಾಂಪ್ರದಾಯಿಕ ಔತಣಕೂಟಕ್ಕೆ (ಟೀ ಪಾರ್ಟಿ) ಬಿಜೆಪಿ ನಾಯಕರು ಗೈರುಹಾಜರಾಗಿದ್ದು ಉದ್ಧವ್ ಅವರನ್ನು ಕೆರಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ‘ನಾನೂ ಟೀ ಮಾರುತ್ತಿದ್ದೆ’ ಹೇಳಿಕೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಜೆಪಿ ಮಹಾರಾಷ್ಟ್ರ ಘಟಕವನ್ನು ವ್ಯಂಗ್ಯ ಮಾಡಲು ಬಳಸಿಕೊಂಡಿದ್ದಾರೆ.

‘ಹಿಂದುತ್ವದ ಪ್ರತಿಪಾದಕ ವೀರ್ ಸಾವರ್ಕರ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವಮಾನಗೊಳಿಸಿದ್ದಾರೆ. ಅಂಥವರ ಜೊತೆಗೆ ಶಿವಸೇನಾ ಕೈಜೋಡಿಸಿದೆ’ ಎಂದು ದೂರಿದ್ದ ಬಿಜೆಪಿ ವಿವಿಧ ಕಾರಣಗಳನ್ನು ಮುಂದಿಟ್ಟು ಔತಣಕೂಟದಿಂದ ದೂರ ಉಳಿದಿತ್ತು.

‘ನಮ್ಮ ಪ್ರಧಾನಿಯ ಹಿನ್ನೆಲೆ ನಮಗೆ ಗೊತ್ತು. ಅವರು ಒಂದು ಕಾಲಕ್ಕೆ ಟೀ ಮಾರುತ್ತಿದ್ದರು. ಆದರೆ ನನಗೆ ನಮ್ಮ ರಾಜ್ಯದ ಬಿಜೆಪಿ ನಾಯಕರು ಟೀ ಕುಡಿಯಲು ಯಾಕೆ ಬರಲಿಲ್ಲವೋ ಅರ್ಥವಾಗಲಿಲ್ಲ. ಬಹುಶಃ ಪ್ರಧಾನಿಯೊಂದಿಗೆ ಮಹಾರಾಷ್ಟ್ರ ಬಿಜೆಪಿ ಘಟಕದ ನಾಯಕರಿಗೆ ಭಿನ್ನಾಭಿಪ್ರಾಯ ಇರಬಹುದು’ ಎಂದು ಠಾಕ್ರೆ ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT