ಸಂಗ್ರಹ ಚಿತ್ರ 
ದೇಶ

'ಅಯ್ಯಪ್ಪ ಭಕ್ತರ ಪ್ರಚೋದಿಸಬೇಡಿ'; ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಗಾಯಕ ಕೆ.ಜೆ.ಯೇಸುದಾಸ್‌ ವಿರೋಧ

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಖ್ಯಾತ ಗಾಯಕ ಕೆ.ಜೆ.ಯೇಸುದಾಸ್‌ ವಿರೋಧ ವ್ಯಕ್ತಪಡಿಸಿದ್ದು, 'ಅಯ್ಯಪ್ಪ ಭಕ್ತರ ಪ್ರಚೋದಿಸಬೇಡಿ' ಎಂದು ಎಚ್ಚರಿಕೆ ನೀಡಿದ್ದಾರೆ.

ಕೊಚ್ಚಿನ್: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಖ್ಯಾತ ಗಾಯಕ ಕೆ.ಜೆ.ಯೇಸುದಾಸ್‌ ವಿರೋಧ ವ್ಯಕ್ತಪಡಿಸಿದ್ದು, 'ಅಯ್ಯಪ್ಪ ಭಕ್ತರ ಪ್ರಚೋದಿಸಬೇಡಿ' ಎಂದು ಎಚ್ಚರಿಕೆ ನೀಡಿದ್ದಾರೆ.

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ಹಂತ ತಲುಪಿರುವಂತೆಯೇ ಇತ್ತ ಇದೇ ವಿಚಾರವಾಗಿ ಮಾತನಾಡಿರುವ ಖ್ಯಾತ ಗಾಯಕ ಯೇಸುದಾಸ್ ಅವರು, ಮಹಿಳೆಯರ ಉಪಸ್ಥಿತಿಯಿಂದ ಪುರುಷ ಭಕ್ತರ ಮನಸ್ಸಿಗೆ ಭಂಗವಾಗಲಿದೆ ಎಂದಾದರೆ, ಮಹಿಳೆಯರು ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡದಿರುವುದೇ ಉತ್ತಮ ಎಂದು ಹೇಳಿದ್ದಾರೆ.

'ಸುಂದರವಾದ ಹುಡುಗಿಯೊಬ್ಬಳು, ಇಂದು ಆಕೆ ಧರಿಸುವ ಉಡುಪಿನಲ್ಲಿ ದೇಗುಲಕ್ಕೆ ತೆರಳಿದರೆ ಸ್ವಾಮಿ ಅಯ್ಯಪ್ಪನೇನೂ ಕಣ್ತೆರೆದು ನೋಡುವುದಿಲ್ಲ. ಆದರೆ, ಇತರೆ ಭಕ್ತರು ನೋಡುತ್ತಾರೆ, ಇದು ಸರಿಯಲ್ಲ. ಇದರಿಂದ ಭಕ್ತರ ಉದ್ದೇಶವೇ ಬದಲಾಗಲಿದೆ. ಇದೇ ಕಾರಣದಿಂದ ನೀವು ಬರಬೇಡಿ ಎಂದು ಅವರಿಗೆ (ಮಹಿಳೆಯರಿಗೆ) ನಾವು ಹೇಳುತ್ತಿದ್ದೇವೆ. ಇನ್ನೂ ಸಾಕಷ್ಟು ದೇವಸ್ಥಾನಗಳಿವೆ. ಮಹಿಳೆಯರು ಅಲ್ಲಿಗೆ ಹೋಗಲಿ. ಅಯ್ಯಪ್ಪ ಭಕ್ತರನ್ನು ಪ್ರಚೋದಿಸಬೇಡಿ ಎಂಬುದಷ್ಟೇ ಮಹಿಳೆಯರಿಗೆ ನನ್ನ ಮನವಿ ಎಂದು ಯೇಸುದಾಸ್ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT