ಎಸ್ ಎ ಬೊಬ್ಡೆ 
ದೇಶ

ನಿರ್ಭಯಾ ಹತ್ಯಾಚಾರ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಬೊಬ್ಡೆ, ಗಲ್ಲು ಮತ್ತಷ್ಟು ವಿಳಂಬ ಸಾಧ್ಯತೆ

ಇಡೀ ದೇಶವನ್ನೆ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಕಾಮುಕರು ಸಲ್ಲಿಸಿರುವ ಮರು....

ನವದೆಹಲಿ: ಇಡೀ ದೇಶವನ್ನೆ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಕಾಮುಕರು ಸಲ್ಲಿಸಿರುವ ಮರು ಪರಿಶೀಲನಾ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಹಿಂದೆ ಸರಿದಿದ್ದು, ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್‌ ಕುಮಾರ್‌ ಸಿಂಗ್‌ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ, ಅರ್ಜಿಯ ವಿಚಾರಣೆಗೆ  ಹೊಸ ಪೀಠ ರಚಿಸುವುದಾಗಿ ಹೇಳಿ ವಿಚಾರಣೆಯನ್ನು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿದೆ.

ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರು ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದು, ಬುಧವಾರ ಹೊಸ ಪೀಠ ರಚನೆ ಮಾಡಲಾಗುವುದು ಎಂದುತಿಳಿಸಿದ್ದಾರೆ. 

ನಿರ್ಭಯಾ ಪರವಾಗಿ ಎಸ್‌ಎ ಬೊಬ್ಡೆ ಸಂಬಂಧಿಕರು ವಾದ ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ನಿರ್ಭಯಾ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದು ಡಿಸೆಂಬರ್ 16ಕ್ಕೆ 7 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 16ರಂದೇ ಕಾಮುಕರಿಗೆ ನೇಣಿನ ಕುಣಿಕೆ ಬೀಳುತ್ತದೆ ಎನ್ನಲಾಗಿತ್ತು. ಆದರೆ ಅಕ್ಷಯ್ ಸಿಂಗ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿರುವುದರಿಂದ ಗಲ್ಲು ಮತ್ತಷ್ಟು ವಿಳಂಬವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT