ದೆಹಲಿಯ ಸೀಲಾಂಪುರದಲ್ಲಿ ನಿನ್ನೆ ಕಂಡುಬಂದ ಘಟನೆ 
ದೇಶ

ಜಾಮಿಯಾ ಮಿಲಿಯಾ ನಂತರ ದೆಹಲಿಯಲ್ಲಿ ಹಿಂಸಾರೂಪಕ್ಕೆ ತಿರುಗಿದ ಮತ್ತೊಂದು ಪ್ರತಿಭಟನೆ:ಕಲ್ಲು ತೂರಾಟ, ಹಾನಿ 

ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಪಟ್ಟಂತೆ ಹೊಸದೊಂದು ಹಿಂಸಾಚಾರ ದೆಹಲಿಯಲ್ಲಿ ಆರಂಭವಾಗಿದ್ದು, ಈಶಾನ್ಯ ದೆಹಲಿಯ ಸೀಲಾಂಪುರ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಬಸ್ಸುಗಳಿಗೆ ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ತೊಂದರೆ ಮಾಡಿದ್ದಾರೆ. 

ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಪಟ್ಟಂತೆ ಹೊಸದೊಂದು ಹಿಂಸಾಚಾರ ದೆಹಲಿಯಲ್ಲಿ ಆರಂಭವಾಗಿದ್ದು, ಈಶಾನ್ಯ ದೆಹಲಿಯ ಸೀಲಾಂಪುರ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಬಸ್ಸುಗಳಿಗೆ ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ತೊಂದರೆ ಮಾಡಿದ್ದಾರೆ. 


ಪ್ರತಿಭಟನಾಕಾರರು ಜಫ್ರಬಾದ್ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಪೊಲೀಸರು ಅಶ್ರುವಾಯು ಸಿಡಿಸಿದರು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರಿಗೆ ಸುಮಾರು 4 ಗಂಟೆ ಹಿಡಿಯಿತು. ನಿನ್ನೆ ಸಾಯಂಕಾಲ ಈ ಘಟನೆ ನಡೆದಿದೆ.


ಈ ಕುರಿತು ಪ್ರತಿಕ್ರಿಯೆ ನೀಡಿದ ದೆಹಲಿ ಪೊಲೀಸ್ ಹೆಚ್ಚುವರಿ ಸಾರ್ವಜನಿಕ ಸಂಪರ್ಕಾಧಿಕಾರಿ ಅನಿಲ್ ಮಿತ್ತಲ್, ಸಾಮೂಹಿಕ ದಾಳಿಯಲ್ಲಿ 18 ಮಂದಿಗೆ ಗಾಯವಾಗಿದೆ. ಅವರಲ್ಲಿ 11 ಮಂದಿ ಪೊಲೀಸ್ ಸಿಬ್ಬಂದಿ. ಸೀಲಾಂಪುರ್ ಮತ್ತು ಜಫ್ರಾಬಾದ್ ಪೊಲೀಸ್ ಠಾಣೆಗಳಲ್ಲಿ ಗಲಭೆಗೆ ಸಂಬಂಧಪಟ್ಟಂತೆ ಎರಡು ಕೇಸುಗಳು ದಾಖಲಾಗಿದ್ದು ಸಾರ್ವಜನಿಕ ಸೇವೆಯಲ್ಲಿರುವವರು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ಮಾಡಿದ್ದಾರೆ ಎಂದರು.


ನಿನ್ನೆ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಕೆಲವು ಸಮಾಜ ವಿರೋಧಿ ಶಕ್ತಿಗಳು ಪೊಲೀಸರನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದರು. ನಾವು ಅಶ್ರುವಾಯು ಪ್ರಯೋಗಿಸಿದೆವು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಎರಡು ಬಸ್ಸುಗಳು, ಮೂರು ಬೈಕ್ ಮತ್ತು ಎರಡು ಪೊಲೀಸ್ ಬೂತ್ ಗಳು ಹಾನಿಗೀಡಾಗಿವೆ.


ನಗರದ ಉಳಿದ ಕಡೆಗಳಲ್ಲಿ ನಿನ್ನೆ ಪ್ರತಿಭಟನೆ ಮುಂದುವರಿದಿತ್ತು. ಮುಸಲ್ಮಾನರು ಹೆಚ್ಚಾಗಿರುವ ಪ್ರದೇಶಗಳಲ್ಲಿ ವ್ಯಾಪಾರಿಗಳು ಮತ್ತು ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದ್ದವು. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಹತ್ತಿರ ಕೂಡ ಪ್ರತಿಭಟನೆ ಮುಂದುವರಿದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT