ಶಾಹಿ ಇಮಾಮ್ ಸೈಯದ್‌ ಅಹಮದ್ ಬುಖಾರಿ 
ದೇಶ

ಪೌರತ್ವ ತಿದ್ದುಪಡಿ ಮಸೂದೆಯಿಂದ ಭಾರತದ ಮುಸ್ಲಿಮರಿಗೆ ತೊಂದರೆಯಿಲ್ಲ: ಅಹಮದ್ ಬುಖಾರಿ

ಪೌರತ್ವ ತಿದ್ದುಪಡಿ ಮಸೂದೆಯಿಂದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ನಿರಾಶ್ರಿತರ ಮುಸ್ಲಿಮರಿಗೆ ತೊಂದರೆಯಾಗುತ್ತದೆಯೇ ಹೊರತು, ಭಾರತದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಜಾಮಿಯಾ ಮಸೀದಿಯ ಶಾಹಿ ಇಮಾಮ್ ಸೈಯದ್‌ ಅಹಮದ್ ಬುಖಾರಿ ಹೇಳಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯಿಂದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ನಿರಾಶ್ರಿತರ ಮುಸ್ಲಿಮರಿಗೆ ತೊಂದರೆಯಾಗುತ್ತದೆಯೇ ಹೊರತು, ಭಾರತದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಜಾಮಿಯಾ ಮಸೀದಿಯ ಶಾಹಿ ಇಮಾಮ್ ಸೈಯದ್‌ ಅಹಮದ್ ಬುಖಾರಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹೊತ್ತಿನಲ್ಲೇ ಈ ಕುರಿತಂತೆ ಜಾಮಿಯಾ ಮಸೀದಿಯ ಶಾಹಿ ಇಮಾಮ್ ಸೈಯದ್‌ ಅಹಮದ್ ಬುಖಾರಿ ಅವರು ಮಸೂದೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿದ ಅವರು, 'ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ನಿರಾಶ್ರಿತರ ಮುಸ್ಲಿಮರಿಗೆ ತೊಂದರೆಯಾಗುತ್ತದೆಯೇ ವಿನಃ ಭಾರತದಲ್ಲಿರುವ ಮುಸ್ಲಿಮರಿಗಲ್ಲ. ರಾಷ್ಟ್ರೀಯ ಪೌರತ್ವ ನೋಂದಣಿಗೂ (ಎನ್‌ಆರ್‌ಸಿ), ಪೌರತ್ವ (ತಿದ್ದುಪಡಿ) ಕಾಯ್ದೆಗೂ (ಸಿಎಎ) ವ್ಯತ್ಯಾಸವಿದೆ. ಸಿಎಎ ಈಗಾಗಲೇ ಕಾಯ್ದೆಯಾಗಿದೆ. ಆದರೆ, ಎನ್‌ಆರ್‌ಸಿ ಕೇವಲ ಘೋಷಣೆಯಾಗಿದೆಯೇ ಹೊರತು ಇನ್ನೂ ಕಾಯ್ದೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಅಂತೆಯೇ 'ಪ್ರತಿಭಟನೆ ಎನ್ನುವುದು ಭಾರತೀಯರ ಹಕ್ಕು. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದಾಗ್ಯೂ, ಪ್ರತಿಭಟನೆಯ ಮಿತಿಯನ್ನು ತಿಳಿದಿರಬೇಕು. ನಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ' ಎಂದು ಅಹಮದ್ ಬುಖಾರಿ ಹೇಳಿದ್ದಾರೆ.

ಇತ್ತ ದೆಹಲಿಯ ಸೀಲಾಂಪುರದಲ್ಲಿ ಮಂಗಳವಾರ ಸಂಜೆ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, 12 ಪೊಲೀಸರು ಸೇರಿ 21 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT