ಪ್ರಿಯಾಂಕಾ ರೆಡ್ಡಿ 
ದೇಶ

ಹೈದರಾಬಾದ್ ಎನ್ಕೌಂಟರ್: ಸುಪ್ರೀಂ ಮೆಟ್ಟಿಲೇರಿದ ಅತ್ಯಾಚಾರಿ ಕುಟುಂಬ, ಸಿಬಿಐ ತನಿಖೆಗೆ ಮನವಿ

ಸೈಬರಾಬಾದ್ ಪೊಲೀಸ ಎನ್ಕೌಂಟರ್'ನಲ್ಲಿ ಹತ್ಯೆಗೀಡಾದ ದಿಶಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳ ಕುಟುಂಬದ ಸಂಬಂಧಿಕರು ಈ ಎನ್ಕೌಂಟರ್ ಪ್ರಕರಣ ಸಂಬಂದ ಸಿಬಿಐ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಅಲ್ಲದೆ, ತಮ್ಮ ಪ್ರತಿಯೊಂದು ಕುಟುಂಬಕ್ಕೂ ರೂ.50 ಲಕ್ಷ ಪರಿಹಾರ ನೀಡಬೇಕೆಂದು ಆರೋಪಿಗಳ ಸಂಬಂಧಿಕರು ಕೋರಿದ್ದಾರೆ. 

ನವದೆಹಲಿ: ಸೈಬರಾಬಾದ್ ಪೊಲೀಸ ಎನ್ಕೌಂಟರ್'ನಲ್ಲಿ ಹತ್ಯೆಗೀಡಾದ ದಿಶಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳ ಕುಟುಂಬದ ಸಂಬಂಧಿಕರು ಈ ಎನ್ಕೌಂಟರ್ ಪ್ರಕರಣ ಸಂಬಂದ ಸಿಬಿಐ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಅಲ್ಲದೆ, ತಮ್ಮ ಪ್ರತಿಯೊಂದು ಕುಟುಂಬಕ್ಕೂ ರೂ.50 ಲಕ್ಷ ಪರಿಹಾರ ನೀಡಬೇಕೆಂದು ಆರೋಪಿಗಳ ಸಂಬಂಧಿಕರು ಕೋರಿದ್ದಾರೆ. 

ಎನ್'ಕೌಂಟರ್ ಪ್ರಕರಣದ ತನಿಖೆಯನ್ನು ಈಗಾಗಲೇ ನಿವೃತ್ತಿ ನ್ಯಾಯಾಧೀಶ ವಿ.ಎಸ್.ಸಿರ್'ಪುರ್ಕರ್ ನೇತೃತ್ವದ ನ್ಯಾಯಾಂಗ ತನಿಖೆಗೆ ವಹಿಸಲಾಗಿದ್ದು, 6 ತಿಂಗಳ ಒಳಗಾಗಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು.

ನವೆಂಬರ್ 29 ರಂದು ಹತ್ಯೆಯಾಗಿರುವ ಕಾಮುಕರು ಪ್ರಿಯಾಂಕಾ ರೆಡ್ಡಿ ಮೇಲೆ ಅಟ್ಟಹಾಸ ಮೆರೆದಿದ್ದರು. ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದ ನಾಲ್ವರು ಕಾಮುಕರು, ನಂತರ ಆಕೆಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು. 

ಘಟನೆ ಬಳಿಕ ಕಾಮುಕರನ್ನು ಬಂಧನಕ್ಕೊಳಪಡಿಸಿದ್ದ ಪೊಲೀಸರು ತನಿಖೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಆರೋಪಿಗಳನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೆ, ಪೊಲೀಸರ ಬಳಿಯಿದ್ದ ಪಿಸ್ತೂಲನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಕಾಮುಕರ ಮೇಲೆ ಎನ್'ಕೌಂಟರ್ ನಡೆಸಿ ಹತ್ಯೆ ಮಾಡಿದ್ದರು. ಪೊಲೀಸರ ಈ ಕಾರ್ಯಕ್ಕೆ ದೇಶದಾದ್ಯಂತ ಶ್ಲಾಘನೆಗಳು ವ್ಯಕ್ತವಾಗಿತ್ತು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT